Karnataka news paper

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಸ್ಥಳಗಳ ಮರುನಾಮಕರಣದ ಜ್ವರದಿಂದ ಬಳಲುತ್ತಿದ್ದಾರೆ: ಓವೈಸಿ



ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಸ್ಥಳಗಳ ಮರುನಾಮಕರಣದ ಜ್ವರದಿಂದ ಬಳಲುತ್ತಿದ್ದಾರೆ: ಓವೈಸಿ

ಅಸಾದುದ್ದೀನ್ ಓವೈಸಿ

ANI

ಫಿರೋಜಾಬಾದ್: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸ್ಥಳಗಳನ್ನು ಮರುನಾಮಕರಣ ಮಾಡುವ ಜ್ವರದಿಂದ ಬಳಲುತ್ತಿದ್ದಾರೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಫಿರೋಜಾಬಾದ್‌ನಲ್ಲಿ ಆಗಸ್ಟ್-ಸೆಪ್ಟೆಂಬರ್‌ ತಿಂಗಳಲ್ಲಿ ವೈರಲ್ ಜ್ವರದಿಂದ 45 ರಿಂದ 200 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮ ವರದಿಗಳು ಹೇಳುತ್ತವೆ. ಆದರೆ, ಈ ಬಗ್ಗೆ ಸಿಎಂ ಯೋಗಿ ಆದಿತ್ಯಾನಾಥ್ ಅವರನ್ನು ನೀವೇನಾದರೂ ಪ್ರಶ್ನಿಸಿದರೆ, ಜಿಲ್ಲೆಯ ಹೆಸರಿನಿಂದಲೇ ಜಿಲ್ಲೆಗೆ ಜ್ವರ ಬಂದಿದೆ. ಅವರು ಸ್ಥಳಗಳನ್ನು ಮರುನಾಮಕರಣ ಮಾಡುವ ಜ್ವರದಿಂದಲೇ ಬಳಲುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದೇ ವೇಳೆ, ರಾಜ್ಯದಲ್ಲಿ ಶೇ 19ರಷ್ಟಿರುವ ಮುಸ್ಲಿಂ ಜನಸಂಖ್ಯೆಗೆ ಮತ ಚಲಾಯಿಸಲು ಮತ್ತು ತಮ್ಮದೇ ಆದ ರಾಜಕೀಯ ನಾಯಕತ್ವವನ್ನು ಆಯ್ಕೆ ಮಾಡುವ ಬಗ್ಗೆ ಪ್ರಚಾರ ಸಭೆಯಲ್ಲಿ ಓವೈಸಿ ಪುನರುಚ್ಚರಿಸಿದರು. 
 






    Read more