Karnataka news paper

ಮೈಸೂರಿನಲ್ಲಿ ಡಬಲ್ ಮರ್ಡರ್: ಪತ್ನಿಯನ್ನ ಚುಡಾಯಿಸಿದ ಆರೋಪ; ಸ್ನೇಹಿತರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ!


ಮೈಸೂರು: ಪತ್ನಿಯನ್ನ ಆಗಾಗ್ಗೆ ಚುಡಾಯಿಸುತ್ತಿದ್ದ ಸ್ನೇಹಿತನನ್ನು ಎಣ್ಣೆ ಪಾರ್ಟಿಯಲ್ಲಿ ಕೊಚ್ಚಿ‌‌ ಕೊಂದಿರುವ ಘಟನೆ ಬೋಗಾದಿ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಸ್ನೇಹಿತನ ಸಹಾಯಕ್ಕೆ ಬಂದ ಮತ್ತೊಬ್ಬ ಗೆಳೆಯನೂ ಹತ್ಯೆಯಾಗಿದ್ದಾನೆ.

ಹೆಚ್.ಡಿ.ಕೋಟೆ ತಾಲೂಕಿನ ಕೊತ್ತೆಗಾಲ ಗ್ರಾಮದ ರವಿ ಹಾಗೂ ಬಸವ ಕೊಲೆಯಾದವರು. ಹತ್ಯೆಗೈದ ಆರೋಪಿ ಮಹೇಶ್ ಹಾಗೂ ಕೊಲೆಗೆ ಸಹಕರಿಸಿದ ಮತ್ತೊಬ್ಬ ಸ್ನೇಹಿತನನ್ನು ಸರಸ್ವತಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೋಗಾದಿ ಮುಖ್ಯ ರಸ್ತೆಯಲ್ಲಿ ಮಹೇಶ್ , ರವಿ, ಬಸವ ಹಾಗೂ ಮಹೇಶ್ ನ ಸ್ನೇಹಿತ ನಾಲ್ವರೂ ಸೇರಿ ಪಾರ್ಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪತ್ನಿಯನ್ನು ಚುಡಾಯಿಸುವ ಬಗ್ಗೆ ಇವರ ನಡುವೆ ಮಾತಿನ ಚಕಮಕಿ ನಡೆದಿದೆ. ಮೊದಲೇ ಸಿಟ್ಟಿನಲ್ಲಿದ್ದ ಮಹೇಶ್ ಪಿಕಾಸಿಯಿಂದ ರವಿಯ ತಲೆಗೆ ಹೊಡೆದು ಕೊಂದಿದ್ದಾನೆ. ಇದನ್ನು ತಪ್ಪಿಸಲು ಬಂದ ಬಸವನನ್ನೂ ಕೊಲೆ ಮಾಡಿದ್ದಾನೆ. ಈ ಕೊಲೆಗೆ ಮಹೇಶ್ ನ ಸ್ನೇಹಿತನೂ ಸಹಕರಿಸಿದ್ದು ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.



Read more