Karnataka news paper

ಡಿಕೆಶಿ ವಿರುದ್ಧ ದಿಲ್ಲಿ ಅಂಗಳದಲ್ಲಿ ನಡೆಯುತ್ತಿರುವ ಷಡ್ಯಂತ್ರವಾದರೂ ಏನು?


ಬೆಂಗಳೂರು: ನನ್ನ ವಿರುದ್ಧ ಹೊಸದಿಲ್ಲಿಯಲ್ಲಿ ಈಗಾಗಲೇ ಷಡ್ಯಂತ್ರ ಶುರುವಾಗಿದೆ. ಬಿಜೆಪಿ ಹಾಗೂ ಜೆಡಿಎಸ್‌ ಎರಡೂ ಪಕ್ಷಗಳು ಷಡ್ಯಂತ್ರ ನಡೆಸುತ್ತಿದ್ದು, ಎಲ್ಲವೂ ನನಗೆ ಗೊತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡುವ ಮೂಲಕ ರಾಜಕೀಯ ಮೊಗಸಾಲೆಯಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.

ಮೇಕೆದಾಟು ಯೋಜನೆ ಆರಂಭಿಸಿ ಪಾದಯಾತ್ರೆ ನಡೆಸಲು ತಯಾರಿ ಮಾಡುತ್ತಿರುವ ಸಂದರ್ಭದಲ್ಲಿ ಡಿಕೆ ಶಿವಕುಮಾರ್‌ ನೀಡಿರುವ ಈ ಹೇಳಿಕೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಡಿಕೆ ಶಿವಕುಮಾರ್ ಪಾದಯಾತ್ರೆ ಮೂಲಕ ಅಬ್ಬರ ಸೃಷ್ಟಿಸಲು ಮುಂದಾಗಿದ್ದಾರೆ. ಈ ಮೂಲಕ ಸರಕಾರದ ವಿರುದ್ಧ ಜನಾಭಿಪ್ರಾಯ ರೂಪಿಸುವುದು ಡಿಕೆ ಶಿವಕುಮಾರ್ ತಂತ್ರಗಾರಿಕೆಯಾಗಿದೆ.

ಮೇಕೆದಾಟು ಪಾದಯಾತ್ರೆ: ಡಿಕೆಶಿ ಅಬ್ಬರ, ಸಿದ್ದು ಸೈಲೆಂಟ್ !

ಅಷ್ಟಕ್ಕೂ ಡಿಕೆ ಶಿವಕುಮಾರ್ ವಿರುದ್ಧ ಯಾವ ರೀತಿಯ ಷಡ್ಯಂತ್ರ ನಡೆಯುತ್ತಿದೆ? ಹಾಗೂ ಇದರ ಹಿಂದೆ ಯಾರು ಇದ್ದಾರೆ ಎಂಬುವುದು ಕೂಡಾ ಚರ್ಚಾ ವಿಷಯವಾಗಿದೆ. ಈಗಾಗಲೇ ಅಕ್ರಮ ಆಸ್ತಿ ಸಂಪಾದನೆ ವಿಚಾರವಾಗಿ ಡಿಕೆ ಶಿವಕುಮಾರ್ ವಿರುದ್ಧ ಇಡಿಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು ಎರಡು ತಿಂಗಳುಗಳ ಕಾಲ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಯನ್ನು ಅನುಭವಿಸಿದ್ದರು.

ಇನ್ನೇನು ಅವರ ರಾಜಕೀಯ ಜೀವನ ಮುಗಿದೇ ಹೋಯ್ತು ಎಂಬ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಎಐಸಿಸಿ ಅಧ್ಯತೆ ಸೋನಿಯಾ ಗಾಂಧಿ ಅವರು ಡಿಕೆ ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ನೀಡಿದರು. ಪಕ್ಷದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗಿದ್ದರೂ ಈ ಪಟ್ಟ ಪಡೆಯುವಲ್ಲಿ ಡಿಕೆ ಶಿವಕುಮಾರ್ ಸಕ್ಸಸ್ ಆದರು. ಇದೀಗ ಪಕ್ಷ ಸಂಘಟನೆಯಲ್ಲಿ ಗಮನ ಸೆಳೆಯುವ ರೀತಿಯಲ್ಲೇ ಕೆಲಸ ಮಾಡುತ್ತಿದ್ದಾರೆ.

ಈ ನಡುವೆ ಸದ್ಯದ ರಾಜಕೀಯ ವಾತಾವರಣ ಕಾಂಗ್ರೆಸ್‌ಗೆ ಪೂರಕವಾಗಿ ಇರುವ ಹಿನ್ನೆಲೆಯಲ್ಲಿ ಮುಂದಿನ ಮುಖ್ಯಮಂತ್ರಿ ಸ್ಥಾನದ ಮೇಲೂ ಡಿಕೆ ಶಿವಕುಮಾರ್ ಕಣ್ಣಿಟ್ಟಿದ್ದಾರೆ. ಅದಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಪಕ್ಷದಲ್ಲೂ ಆಂತರಿಕವಾಗಿ ತಮ್ಮ ವರ್ಚಸ್ಸು ಬಲಪಡಿಸುವ ನಿಟ್ಟಿನಲ್ಲೂ ಡಿಕೆ ಶಿವಕುಮಾರ್ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.

ಮೇಕೆದಾಟು ಪಾದಯಾತ್ರೆಗೆ ಯಾರ ಅನುಮತಿಯ ಅವಶ್ಯಕತೆಯೂ ಇಲ್ಲ – ಡಿಕೆ ಶಿವಕುಮಾರ್

ಆದರೆ ಡಿಕೆ ಶಿವಕುಮಾರ್‌ಗೆ ಅಕ್ರಮ ಆಸ್ತಿ ಸಂಪಾದನೆ ಆರೋಪ ರಾಜಕೀಯವಾಗಿ ಒಂದು ಹಿನ್ನಡೆಯ ಅಂಶವಾಗಿದೆ.

ಈ ಬ್ರಹ್ಮಾಸ್ತ್ರ ಇದೀಗ ರಾಜಕೀಯವಾಗಿ ತಮ್ಮ ವಿರುದ್ಧ ಬಳಕೆಯಾಗುವ ಮುನ್ಸೂಚನೆಯನ್ನು ಡಿಕೆ ಶಿವಕುಮಾರ್ ನೀಡಿದ್ದಾರೆ. ಎರಡು ರಾಜಕೀಯ ಪಕ್ಷಗಳು ನನ್ನ ವಿರುದ್ಧ Ig ಷಡ್ಯಂತ್ರ ರೂಪಿಸುತ್ತಿದೆ ಎಂಬ ಆರೋಪ ಮಾಡಿದ್ದಾರೆ. ಆದರೆ ಈ ಷಡ್ಯಂತ್ರದಿಂದ ಹೇಗೆ ಪಾರಾಗುತ್ತಾರೆ? ಎಂಬುವುದು ಸದ್ಯದ ಕುತೂಹಲ.



Read more