ಹೈಲೈಟ್ಸ್:
- ಜೆಡಿಎಸ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ
- ಕುಮಾರಸ್ವಾಮಿ ಮನೆ ಬಾಗಿಲಿಗೆ ನಾನು ಹೋಗಿಲ್ಲ ಎಂದ ಸಿದ್ದು
- ಸರ್ಕಾರ ಮಾಡೋಣ ಎಂದು ನಾನು ಕರೆದಿಲ್ಲ ಎಂದ ಮಾಜಿ ಸಿಎಂ
ಕೋಲಾರದ ಆರ್ ಎಲ್ ಜಾಲಪ್ಪ ಆಸ್ಪತ್ರೆ ಬಳಿ ಮಾದ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಮತಾಂತರ ತಡೆ ಕಾಯ್ದೆ ಬಗ್ಗೆ ನಮ್ಶ ಶಾಸಕರೊಂದಿಗೆ ಸಭೆ ನಡೆಸಿ ನಾಳೆಯ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯ ಬಗ್ಗೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು , ಇನ್ನು ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 15 ಸ್ಥಾನದಲ್ಲಿ ಗೆಲ್ಲುವುದು ಖಚಿತ ,ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಯಾಗಿದೆ ಜೆಡಿಎಸ್ನವರು ಬಿಜೆಪಿಗೆ ಯಾವಾಗಲು ಬಿ ಟೀಮ್ ಕುಂಬಳಕಾಯಿ ಕಳ್ಳ ಎಂದರೆ ಕುಮಾರಸ್ವಾಮಿ ಹೆಗಲು ಮುಟ್ಟಿ ನೋಡಿಕೊಳ್ಳುವುದು ಯಾಕೆ, ಗೋಹತ್ಯೆ ನಿಷೇಧ ಕಾನೂನಿಗೆ ಜೆಡಿಎಸ್ ಬೆಂಬಲ ನೀಡಿದೆ ಜೆಡಿಎಸ್ ಬಿಜೆಪಿಯ ಬಿ ಟೀಮ್ ಆದ್ದರಿಂದಲೇ, ಬೀ ಟೀಮ್ ಎಂದಿದ್ದೇನೆ ಎಂದರು.
ಸಮ್ಮಿಶ್ರ ಸರ್ಕಾರ ರಚಿಸಲು ಕಾಂಗ್ರೆಸ್ ನಮ್ಮ ಮನೆ ಬಾಗಿಲಿಗೆ ಬಂದಿತ್ತು ಎಂಬ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದು, ನಾನು ಕುಮಾರಸ್ವಾಮಿ ಮನೆ ಬಾಗಿಲಿಗೆ ಹೋಗಿಲ್ಲ, ಅವರ ಮನೆಗೆ ಹೋಗಿ, ಅಯ್ಯೋ ನೀವು ಬನ್ನಿ ಎಂದು ನಾನು ಕರೆದಿಲ್ಲ ಎಂದು ಲೇವಡಿ ಮಾಡಿದರು. ಇನ್ನು ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ವಿರೋಧ ಕುರಿತು ಮಾತನಾಡಿದ ಸಿದ್ದರಾಮಯ್ಯ, ಮೊಟ್ಟೆ ತಿನ್ನೋರು ತಿನ್ಲಿ, ತಿನ್ನದೆ ಇರೋರು ತಿನ್ನೋದು ಬೇಡ. ಮಠಾಧೀಶರ ವಿರೋಧಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.
ವ್ಯಕ್ತಿಗೆ ಬೇಕಾದ ಧರ್ಮವನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಅವನಿಗೆ ಇದೆ : ಮಾಜಿ ಸಚಿವ ಎಚ್ ಆಂಜನೇಯ
ಇನ್ನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಕ್ಷೇತ್ರ ಆಯ್ಕೆ ಕುರಿತು ಮಾತನಾಡಿ ಎಂದು ಕೇಳಿದಕ್ಕೆ, ಅನೇಕ ಕಡೆ ಕರೆದಿದ್ದಾರೆ. ನೋಡೋಣ, ಹೈ ಕಮಾಂಡ್ ಏನು ಹೇಳುತ್ತೊ ನೋಡೋಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮೂಲಗಳ ಪ್ರಕಾರ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಗೆ ಚಾಮರಾಜಪೇಟೆಯಿಂದ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸಿದ್ದರಾಮಯ್ಯ ಎಲ್ಲೂ ಕೂಡ ಗುಟ್ಟುಬಿಟ್ಟುಕೊಟ್ಟಿಲ್ಲ. ಆದರೆ ಅನೇಕರು ಸಿದ್ದರಾಮಯ್ಯ ಅವರನ್ನು ತಮ್ಮ ಕ್ಷತ್ರದಿಂದ ಸ್ಪರ್ಧಿಸುವಂತೆ ಮನವಿ ಮಾಡಿಕೊಂಡಿದ್ದಾರೆ.