Karnataka news paper

ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನ ಬೇಸತ್ತಿದ್ದಾರೆ : ಮಾಜಿ ಸಿಎಂ ಸಿದ್ದರಾಮಯ್ಯ


ಹೈಲೈಟ್ಸ್‌:

  • ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ
  • ಸರ್ಕಾರದ ದುರಾಡಳಿತದಿಂದ ಜನ ಬೇಸತ್ತಿದ್ದಾರೆ
  • ಬಿಜೆಪಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಸರ್ಕಾರದ ದುರಾಡಳಿತದಿಂದ ಜನ ಬೇಸತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಸರ್ಕಾರದ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ ಎಂದು ಹೇಳಿದರು. ಇದಕ್ಕೆ ಈ ಫಲಿತಾಂಶವೇ ಸಾಕ್ಷಿಯಾಗಿದೆ. ದುಡ್ಡು ಖರ್ಚು ಮಾಡಿದರೆ ಗೆಲ್ಲಲಾಗಲ್ಲ. ದುಡ್ಡಿದೆ, ಅಧಿಕಾರ ಇದೆ ಅಂತ ಜಂಬ ಕೊಚ್ಚಿಕೊಂಡ್ರು. ಗೆದ್ದು ಬಿಡ್ತೇವೆ ಅಂದವರು ಸೋತಿದ್ದಾರೆ ಎಂದರು.

ರಾಜ್ಯದಲ್ಲಿ ಜನರ ಪ್ರೀತಿ ಕಾಂಗ್ರೆಸ್ ಪರವಾಗಿದೆ. 1187 ರಲ್ಲಿ 500ಕ್ಕೂ ಹೆಚ್ಚು ಸ್ಥಾನ ಕಾಂಗ್ರೆಸ್ ಗೆದ್ದಿದೆ. ಬಿಜೆಪಿ 434, ಜೆಡಿಎಸ್ 45ರಲ್ಲಿ ಗೆದ್ದಿವೆ. ಸುಮಾರು ನೂರಕ್ಕೂ ಹೆಚ್ಚು ಸ್ಥಾನ ಅತಂತ್ರವಾಗಿವೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸ್ತಿದೆ ಎಂದರು. ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಜನರಿದ್ದಾರೆ. ಬೆಲೆ ಏರಿಕೆ, ದುರಾಡಳಿತದ ವಿರುದ್ಧ ಬೇಸತ್ತಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ಅಭಿಪ್ರಾಯ.ಈ ಅಭಿಪ್ರಾಯ ಜನರಿಂದ ವ್ಯಕ್ತವಾಗಿದೆ ಎಂದು ಹೇಳಿದರು.

ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರ ಸಭೆ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆದ್ದಿದೆ. ಸಿಎಂ ತವರು ಕ್ಷೇತ್ರದಲ್ಲೂ ಬಿಜೆಪಿಗೆ ಹಿನ್ನಡೆಯಾಗಿದೆ.

ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ : ಎಲ್ಲಿ? ಯಾರಿಗೆ ಒಲಿದಿದೆ ವಿಜಯಲಕ್ಷ್ಮಿ?



Read more