Online Desk
ಬೆಂಗಳೂರು: ಮಹಾರಾಷ್ಟ್ರ ಏಕೀಕರಣ ಸಮಿತಿ ನಿಷೇಧಿಸಿವಂತೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ನಾಳೆ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ವಾಪಸ್ ಪಡೆಯಲಾಗಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರೊಂದಿಗೆ ನಡೆಸಿದ ಮಾತುಕತೆ ಫಲಪ್ರದವಾಗಿದ್ದು, ನಾಳಿನ ಬಂದ್ ಕೈಬಿಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿರುವ ಮುಖಂಡರು ನಾಳಿನ ಬಂದ್ ಆಚರಣೆಯನ್ನು ಹಿಂಪಡೆದಿದ್ದು, ಮತ್ತೊಂದು ದಿನಾಂಕ ನಿಗದಿಪಡಿಸಿದ್ದಾರೆ.
ಮುಖ್ಯಮಂತ್ರಿ @BSBommai ಅವರು ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರೊಂದಿಗೆ ಇಂದು ಮಾತುಕತೆ ನಡೆಸಿ, ಡಿಸೆಂಬರ್ 31ರಂದು ಕರೆ ನೀಡಿರುವ ಬಂದ್ ಹಿಂಪಡೆಯುವಂತೆ ಮನವೊಲಿಸಿದರು.
ಮಾಜಿ ಶಾಸಕ ವಾಟಾಳ್ ನಾಗರಾಜ್, ಪ್ರವೀಣ್ ಶೆಟ್ಟಿ, ಸಾ.ರಾ. ಗೋವಿಂದ್ ಮತ್ತಿತರರು ಉಪಸ್ಥಿತರಿದ್ದರು. pic.twitter.com/yQmjnHsdkl
— CM of Karnataka (@CMofKarnataka) December 30, 2021
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ನಾಳಿನ ಬಂದ್ ವಾಪಸ್ ಪಡೆಯಲು ವಾಟಾಳ್ ನಾಗರಾಜ್ ಮತ್ತು ಸಾ. ರಾ. ಗೋವಿಂದ್ ಸ್ಪಂದಿಸಿದ್ದು, ಅವರಿಗೆ ಧನ್ಯವಾದಗಳು ಎಂದರು.
ಡಿಸೆಂಬರ್ 31ರಂದು ಕನ್ನಡಪರ ಸಂಘಟನೆಗಳು ನೀಡಿದ್ದ ಬಂದ್ ಕರೆಯನ್ನು ಹಿಂಪಡೆದಕ್ಕಾಗಿ ಮುಖ್ಯಮಂತ್ರಿ @BSBommai ಅವರು ಎಲ್ಲ ಸಂಘಟನೆಗಳ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸಿದರು. pic.twitter.com/jZueMv0mG3
— CM of Karnataka (@CMofKarnataka) December 30, 2021
ವಾಟಾಳ್ ನಾಗರಾಜ್ ಮಾತನಾಡಿ, ಸಿಎಂ ಮನವಿ ಮೇರೆಗೆ ನಾವೆಲ್ಲಾ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಹೊಸ ವರ್ಷಕ್ಕೆ ತೊಂದರೆಯಾಗಲಿದೆ. ಅದು ಸರಿಯಿಲ್ಲ ಎಂಬುದಾಗಿ ನಿರ್ಧಾರ ತೆಗೆದುಕೊಂಡಿದ್ದು, ನಾಳಿನ ಬಂದ್ ಮುಂದೂಡಲಾಗಿದೆ ಎಂದು ತಿಳಿಸಿದರು. ಮುಂದಿನ ಬಂದ್ ದಿನಾಂಕ ಕುರಿತು ಇನ್ನೂ ಎರಡು ಮೂರು ದಿನಗಳಲ್ಲಿ ಸಭೆ ಕರೆದು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.