ಹೈಲೈಟ್ಸ್:
- ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಸಚಿವ ಬಿ. ಶ್ರೀರಾಮುಲು ಆಕ್ರೋಶ
- ಸಿದ್ದರಾಮಯ್ಯ ಒಬ್ಬ ಭಂಡ…ಡಬಲ್ ಸ್ಟ್ಯಾಂಡರ್ಡ್ ವ್ಯಕ್ತಿ ಎಂದು ಕಿಡಿ
- ಡಿಕೆಶಿ ಫೋಟೋ ಶೂಟ್ ಬಗ್ಗೆ ಶ್ರೀರಾಮುಲು ವ್ಯಂಗ್ಯ
ಡಿಕೆಶಿ ಫೋಟೋ ಶೂಟ್ ಬಗ್ಗೆ ಶ್ರೀರಾಮುಲು ವ್ಯಂಗ್ಯ
ಇನ್ನು ಮೇಕೆದಾಟು ಪಾದಯಾತ್ರೆಯ ಡಿಕೆಶಿ ಫೋಟೋ ಶೂಟ್ ಬಗ್ಗೆ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ. ಮೇಕೆದಾಟು ಪಾದಯಾತ್ರೆ ಮಾಡಬೇಕು ಅಂತ ಪಾಪ ಎಲ್ಲೋ ಶೂಟಿಂಗ್ ಮಾಡ್ತಿದ್ದರಂತೆ. ಫೇಸ್ಬುಕ್ ವಾಟ್ಸ್ಯಾಪ್ ನಲ್ಲಿ ಟ್ರೋಲ್ ಮಾಡ್ಕೊಂಡು ಲಾಭ ಪಡಿಬೇಕು ಅಂತ ಶೂಟಿಂಗ್ ನಲ್ಲಿ ಬ್ಯೂಸಿ ಆಗಿದ್ದಾರೆ. ಕೆಲಸ ಇಲ್ಲದ ಟೈಮ್ ನಲ್ಲಿ 2023ಕ್ಕೆ ಅಧಿಕಾರಕ್ಕೆ ಬರಬೇಕು ಅಂತ ಹಗಲು ಕನಸು ಕಾಣುತ್ತಿದ್ದಾರೆ ಎಂದರು.
ಇನ್ನು ಇನ್ನೊಬ್ಬರು ಮುಖ್ಯಮಂತ್ರಿ ಆಗ್ತೀನಿ ಅನ್ನೋರು ಯೋಜನೆಗಳ ಮೇಲೆ ಯೋಜನೆ ಘೋಷಣೆ ಮಾಡ್ತಿದ್ದಾರೆ. ಅದು ಮಾಡ್ತೀವಿ, ಇದು ಮಾಡ್ತೀವಿ ಅಂತ ಮುಖ್ಯಮಂತ್ರಿ ಆಗಿದ್ದೀವಿ ಅಂತಲೇ ತಿಳಿದಿದ್ದಾರೆ. ಅವರು ಭ್ರಮೆಯಲ್ಲಿ ಇದ್ದಾರೆ. ಏನೇ ನಾಟಕ ಮಾಡಿದ್ರೂ ಕೂಡ ಎಲ್ಲ ವ್ಯರ್ಥ ಆಗುತ್ತೆ. ಪ್ರದೇಶ್ ಕಾಂಗ್ರೆಸ್ ಪಕ್ಷ ಅಲ್ಲ ಈಗ ಪರದೇಸಿ ಕಾಂಗ್ರೆಸ್ ಆಗಿದೆ. ಪರದೇಸಿ ಕಾಂಗ್ರೆಸ್ ಪಕ್ಷಕ್ಕೆ ನಾಯಕ ಯಾರು.? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪಾದಯಾತ್ರೆಯಿಂದ ಮೇಕೆದಾಟು ಬಿಕ್ಕಟ್ಟು ಮತ್ತಷ್ಟು ಜಟಿಲ: ಎಚ್. ಡಿ. ಕುಮಾರಸ್ವಾಮಿ
ಒಂದು ಕಡೆ ದುಡ್ಡು ಇರೋ ಡಿಕೆಶಿ, ಅವರು ಕೇವಲ ಫೋಸ್ ಕೊಟ್ಟು, ಅಲ್ಲೆಲ್ಲೋ ರೈತರ ಜತೆ ಫೋಟೊ ತೆಗೆಸಿಕೊಂಡು ಪ್ರಚಾರ ಪಡೆಯುತ್ತಾರೆ. ಯಾವುದೋ ಒಂದು ಕಂಪನಿ ತಂದಿದ್ದಾರಂತೆ. ಪಂಜಾಬ್ ನಿಂದ ಬಂದ ಮ್ಯಾಜಿಕ್ ಕಂಪನಿ ಅಂತೆ. ಅವರು ಹೇಳ್ತಾರೆ, ಒಂದು ಲುಂಗಿ ಉಟ್ಕೋ, ನದಿ ಹತ್ರ ಓಡಾಡು ಹಂಗೆ ಮಾಡು ಹಿಂಗೆ ಮಾಡು ಅಂತ ಹೇಳ್ತಾರಂತೆ ಎಂದು ಡಿಕೆಶಿ ಬಗ್ಗೆ ವ್ಯಂಗ್ಯವಾಡಿದರು.
ಎಸ್.ಆರ್.ಪಾಟೀಲ್ ಪರ ಶ್ರೀರಾಮುಲು ಭರ್ಜರಿ ಬ್ಯಾಟಿಂಗ್!
ಇನ್ನು ಇದೆ ವೇಳೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಪರ ಶ್ರೀರಾಮುಲು ಭರ್ಜರಿ ಬ್ಯಾಟಿಂಗ್ ಮಾಡಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆಯ ಎಲ್ಲ ನಾಯಕರನ್ನ ಮುಗಿಸುವ ಕೆಲಸ ಮಾಡುತ್ತಿದ್ದಾರೆ.. ಜಿಲ್ಲೆಯ ಜನರು ಯಾವತ್ತು ಎದ್ದು ನಿಲ್ತಾರೋ ಗೊತ್ತಿಲ್ಲ, ಬಿಟ್ಟು ತೊಲಗಬೇಕು ಅನ್ನೋ ಪರಿಸ್ಥಿತಿ ಸಿದ್ದರಾಮಯ್ಯನವರಿಗೆ ಬರಬಹುದು. ಕಾಂಗ್ರೆಸ್ ಪಕ್ಷದ ಭೀಷ್ಮ ಎಸ್ ಆರ್ ಪಾಟೀಲ್, ಜಿಲ್ಲೆಯಲ್ಲಿ ಕಾಂಗ್ರೆಸ್ ಉಳಿದಿದ್ದರೆ ಅದು ಎಸ್ ಆರ್ ಪಾಟೀಲ್ ಕಾರಣ. ಅವರಿಗೆ ಟಿಕೆಟ್ ಸಿಗದಂತೆ ಷಡ್ಯಂತ್ರ ಮಾಡಿದ್ದು ಸಿದ್ದರಾಮಯ್ಯ ಎಂದರು.
ಮತ್ತೊಂದು ಕಡೆ ಚಿಮ್ಮನಕಟ್ಟಿ ಅವರನ್ನ ಕಾಂಗ್ರೆಸ್ ಪಕ್ಷದಿಂದ ಹೊರಗೆ ಕಳಿಸುವ ಕೆಲಸ ಮಾಡ್ತಿದ್ದಾರೆ.. ಸಿದ್ದರಾಮಯ್ಯ ಅವರಿಗೆ ಇನ್ನು ಮುಂದೆ ಇಲ್ಲಿ ನಿಲ್ಲೋದು ಬೇಡ ಅಂತ ಚಿಮ್ಮನಕಟ್ಟಿ ಹೇಳಿದ್ದನ್ನು ಮಾಧ್ಯಮದಲ್ಲಿ ನೋಡಿದ್ದೇನೆ. ಈ ಜಿಲ್ಲೆಗೆ ಅನ್ಯಾಯ ಮಾಡುವ ಕೆಲಸ ಮಾಡಿದ್ದಾರೆ. ಬನಶಂಕರಿ ತಾಯಿ ಕೂಡ ಇಲ್ಲಿ ಅವರಿಗೆ ಮನೆಗೆ ಕಳಿಸುತ್ತಾರೆ ಅಂತ ತಿಳಿದಿದ್ದೀವಿ. ಬೇರೆ ಬೇರೆ ಕಾರಣದಿಂದ ಇಲ್ಲಿ ಗೆದ್ದು, ಜನರ ಕೈಗೆ ಸಿಗದ ವಸ್ತುವಾಗಿದ್ದಾರೆ.
ದರೆ ನಾನು ಮಾತ್ರ ಪ್ರತಿದಿನ ಪಾದಯಾತ್ರೆಗೆ ಪ್ರಾಕ್ಟೀಸ್ ಮಾಡ್ತಿದ್ದೇನೆ ಎಂದ ಡಿಕೆ ಶಿವಕುಮಾರ್
ನನಗೆ ಮಾತನಾಡೋಕೆ ಬರುತ್ತೆ ಅಂತ ಯಾರಿಗೆ ಬೇಕಾದರೂ ಏಕವಚನದಲ್ಲಿ ಮಾತನಾಡಿದ, ಟೀಕೆ ಮಾಡ್ತೀನಿ, ನನಗೆ ಯಾರು ಸಾಟಿಯಿಲ್ಲ, ನಾನು ಮಾತನಾಡಿದ್ದೇ ವೇದವಾಕ್ಯ ಅಂತ ತಿಳಿದಿದ್ದಾರೆ. ಈಗಾಗಲೇ ಸಿದ್ದರಾಮಯ್ಯಗೆ ವಿರೋಧ ವ್ಯಕ್ತವಾಗುತ್ತಿದೆ. ಶೀಘ್ರದಲ್ಲೇ ಜಿಲ್ಲೆಯನ್ನ ಬಿಡಬೇಕು ಅಂತ ಪ್ರತಿಭಟನೆ ಕೂಡ ಆಗಬಹುದು ಎಂದು ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.