Karnataka news paper

ಕೇಂದ್ರದಿಂದ ಕರ್ನಾಟಕದ 30 ಎಫ್‌ ಪಿಒಗಳಿಗೆ 1 ಕೋಟಿ 21 ಲಕ್ಷಕ್ಕೂ ಹೆಚ್ಚಿನ ಅನುದಾನ ಬಿಡುಗಡೆ


Online Desk

ಬೆಂಗಳೂರು: ಸುಮಾರು 351 ರೈತ ಉತ್ಪಾದಕ ಸಂಸ್ಥೆಗಳಿಗೆ 14 ಕೋಟಿ ಇಕ್ವಿಟಿ ಅನುದಾನದಲ್ಲಿ ಕರ್ನಾಟಕದ ಒಟ್ಟು 30 ಎಫ್‌ಪಿಒಗಳ 12047 ಸದಸ್ಯರಿಗೆ 1 ಕೋಟಿ 21 ಲಕ್ಷದ 42 ಸಾವಿರ ರೂಪಾಯಿ ಅನುದಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬಿಡುಗಡೆ ಮಾಡಿದ್ದಾರೆ.

ಈ 1,21,42000 ಅನುದಾನದಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆಯ ಎಫ್‌ಪಿಓಗಳಿಗೆ 57 ಲಕ್ಷದ 74 ಸಾವಿರ ರೂ, ನಬಾರ್ಡ್‌ನ 11 ಎಫ್‌ಪಿಓಗಳಿಗೆ 43 ಲಕ್ಷದ 69 ಸಾವಿರ ರೂ, ಎಸ್‌ಎಫ್‌ಎಸಿಯ 6 ಎಫ್‌ಪಿಓಗಳಿಗೆ 19 ಲಕ್ಷದ 19 ಸಾವಿರ ರೂ.ಅನುದಾನ ಇಕ್ವಿಟಿ ಗ್ರ್ಯಾಂಟ್ ಆಗಿದೆ.

ಇದನ್ನು ಓದಿ: ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶದ 10 ಕೋಟಿ ರೈತರಿಗೆ ಹಣ ಬಿಡುಗಡೆ, ಖಾತೆಗೆ ಹಣ ಜಮೆಯಾಗದಿದ್ದರೆ ಏನು ಮಾಡಬೇಕು?

ರೈತ ಉತ್ಪಾದಕರ ಸಂಸ್ಥೆ ಈಕ್ವಿಟಿ ಅನುದಾನ ಬಿಡುಗಡೆ ಕಾರ್ಯಕ್ರಮ ಭಾರತ ಸರ್ಕಾರದ 2020-21 ನೇ ಸಾಲಿನ ಆಯವ್ಯಯದಲ್ಲಿ Formation and Promotion of 10,000 Farmer Producer Organizations ಎಂದು ಘೋಷಿಸಲಾಗಿರುತ್ತದೆ. 
ರಾಜ್ಯಕ್ಕೆ ವಿವಿಧ ಅನುಷ್ಠಾನ ಸಂಸ್ಥೆಗಳಿಂದ 185 ರೈತ ಉತ್ಪಾದಕರ ಸಂಸ್ಥೆ( ಜಲಾನಯನ ಅಭಿವೃದ್ಧಿ ಇಲಾಖೆ -100, SFAC – 25, NABARD – 37 ಮತ್ತು NCDC – 23 ) ಗಳನ್ನು ರಚಿಸಲು ವಿವಿಧ ಅನುಷ್ಠಾನ ಸಂಸ್ಥೆಗಳಿಗೆ ಗುರಿ ನೀಡಲಾಗಿದೆ. ಅಲ್ಲದೇ ಯೋಜನೆಯಡಿ ಇಲ್ಲಿಯವರೆಗೂ ಒಟ್ಟಾರೆ 152 ರೈತ ಉತ್ಪಾದಕರ ಸಂಸ್ಥೆಗಳನ್ನು ರಚಿಸಲಾಗಿದ್ದು, ಜಲಾನಯನ ಅಭಿವೃದ್ಧಿ ಇಲಾಖೆ -99 SFAC – 21 , NABARD – 313 , NCDC – 1 ಎಫ್‌ಪಿಒ ಆಗಿವೆ.

ರೈತ ಉತ್ಪಾದಕರ ಸಂಸ್ಥೆಗಳಿಗೆ ಸಂಗ್ರಹಿಸಲಾದ ಷೇರು ಮೊತ್ತಕ್ಕೆ ಅನುಗುಣವಾಗಿ ಗರಿಷ್ಠ ರೂ. 15 ಲಕ್ಷಗಳ ವರೆಗೆ ಮ್ಯಾಚಿಂಗ್ ಅನುದಾನವಾಗಿ ಇಕ್ವಿಟಿ ಗ್ರ್ಯಾಂಟ್ ನೀಡಲಾಗುತ್ತಿದೆ. ಈ 15‌ ಲಕ್ಷ ಇಕ್ವಿಟಿ ಗ್ರ್ಯಾಂಟ್‌ಗಳನ್ನು ಗರಿಷ್ಠ ಮೂರು ಹಂತಗಳಲ್ಲಿ ನೀಡಲಾಗುವುದು. ಇದರಿಂದ ರೈತ ಉತ್ಪಾದಕರ ಸಂಸ್ಥೆಗಳ ಬಂಡವಾಳ ನಿಧಿ ಹೆಚ್ಚಾಗಿ ಇದು ವ್ಯವಹಾರ ಅಭಿವೃದ್ಧಿಗೆ ನೆರವಾಗುತ್ತದೆ.

ಇನ್ನು ರೈತ ಉತ್ಪಾದಕರ ಸಂಸ್ಥೆಗಳು ಪಡೆದ ಇಕ್ವಿಟಿ ಗ್ರ್ಯಾಂಟ್ ಅನುದಾನದಲ್ಲಿ ಸದಸ್ಯರುಗಳಿಂದ ಸಂಗ್ರಹಿಸಿದ ಷೇರು ಮೊತ್ತಕ್ಕೆ ಅನುಗುಣವಾಗಿ ಗರಿಷ್ಠ ರೂ 2000ವರೆಗೆ ಸೀಮಿತಗೊಳಿಸಿ ಷೇರುಗಳನ್ನು ನೀಡಲಾಗುವುದು. ಮೊದಲ ಹಂತದಲ್ಲಿ ರಾಜ್ಯದಲ್ಲಿ ಅನುಷ್ಠಾನಗೊಳಿಸುತ್ತಿರುವ 30 ರೈತ ಉತ್ಪಾದಕರ ಸಂಸ್ಥೆಗಳ 12047 ಸದಸ್ಯರುಗಳಿಗೆ 1 ಕೋಟಿ 21 ಲಕ್ಷದ 42 ಸಾವಿರ ರೂ.ಅನುದಾನವನ್ನು ಪ್ರಧಾನ ಮಂತ್ರಿಗಳು ಇಂದು ಬಿಡುಗಡೆ ಮಾಡಿದ್ದಾರೆ.



Read more