Online Desk
ನವದೆಹಲಿ: ದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿದ್ದ ಹೆಲಿಕಾಪ್ಟರ್ ಎಂಐ-17 ವಿ5 ಅಪಘಾತಕ್ಕೆ ಸಂಬಂಧಿಸಿದ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಮುಂದಿನ ವಾರ ವಾಯುಪಡೆ ಕೇಂದ್ರ ಕಚೇರಿಗೆ ಸಲ್ಲಿಕೆಯಾಗುವ ಸಾಧ್ಯತೆಯಿದೆ.
ಅಪಘಾತದ ಕಾರಣದ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲವಾದರೂ, ಹವಾಮಾನ ವೈಫರೀತ್ಯವೇ ಇದಕ್ಕೆ ಪ್ರಮುಖ ಕಾರಣ ಎಂದು ನಂಬಲಾಗಿದೆ. ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ನೇತೃತ್ವದ ತನಿಖೆಯಲ್ಲಿ ಹವಾಮಾನ ವೈಫರೀತ್ಯದಿಂದಾಗಿ ಪೈಲಟ್ ನಿಯಂತ್ರಣ ಕಳೆದುಕೊಂಡಿದ್ದರಿಂದ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ತಾಂತ್ರಿಕ ಆಧಾರದ ಮೇಲೆ ಪೈಲಟ್ ದಿಗ್ಬ್ರಮೆಗೊಂಡಾಗ ಅಥವಾ ಪರಿಸ್ಥಿತಿಯ ನಿಖರವಾದ ಕಲ್ಪನೆಯನ್ನು ಪಡೆಯಲು ಸಾಧ್ಯವಾಗದಿದ್ದಾಗ ಮತ್ತು ಹೆಲಿಕಾಪ್ಟರ್ ಉದ್ದೇಶಪೂರ್ವಕವಾಗಿ ಯಾರಿಗಾದರೂ ಡಿಕ್ಕಿ ಹೊಡೆದಾಗ ಅಂತಹ ಅಪಘಾತಗಳು ಸಂಭವಿಸುತ್ತವೆ. ಆದರೆ. ಪೈಲಟ್ ಹೆಲಿಕಾಪ್ಟರ್ ನ ಸಂಪೂರ್ಣ ನಿಯಂತ್ರಣವನ್ನು ಹೊಂದಿರುತ್ತಾರೆ. ಅಂತಹ ಪರಿಸ್ಥಿತಿಯನ್ನು ಕಂಟ್ರೋಲ್ ಫ್ಲೈಟ್ ಇನ್ಟು ಟೆರೇನ್ ಎಂದು ಕರೆಯಲಾಗುತ್ತದೆ. ಪೈಲಟ್ ಹೆಲಿಕಾಪ್ಟರ್ ನ್ನು ಲ್ಯಾಂಡಿಂಗ್ ಮಾಡುವಾಗ ಇಂತಹ ಅಪಘಾತಗಳು ಹೆಚ್ಚಾಗಿ ಪ್ರತಿಕೂಲ ಹವಾಮಾನದಲ್ಲಿ ಸಂಭವಿಸುತ್ತವೆ. ಅಂತಹ ಪರಿಸ್ಥಿತಿಯಲ್ಲಿ ಪೈಲಟ್ ಗೆ ಹೆಲಿಕಾಪ್ಟರ್ ನಿಯಂತ್ರಿಸುವುದು ಅಸಾಧ್ಯವಾಗುತ್ತದೆ.
ಹೆಲಿಕಾಪ್ಟರ್ ನಲ್ಲಿ ಯಾವುದೇ ತಾಂತ್ರಿಕ ದೋಷ ಇಲ್ಲ ಅಥವಾ ಹೆಲಿಕಾಪ್ಟರ್ ನಲ್ಲಿ ಯಾವುದೇ ದೋಷ ಇಲ್ಲ ಎಂಬ ಸಾಧ್ಯತೆಯನ್ನು ತನಿಖಾ ತಂಡ ತಳ್ಳಿಹಾಕಿದೆ ಎಂದು ತಿಳಿದುಬಂದಿದೆ. ಪ್ರಸ್ತುತ ತನಿಖಾ ತಂಡ ತನ್ನ ವರದಿಯನ್ನು ಖಚಿತಪಡಿಸಲು ಸ್ವತ: ವಾಯುಪಡೆಯ ಕಾನೂನು ವಿಭಾಗದ ಸಲಹೆಯನ್ನು ಪಡೆಯುತ್ತಿದ್ದು, ನಾಲ್ಕೈದು ದಿನಗಳಲ್ಲಿ ಈ ವರದಿ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷವ್ ಅವರಿಗೆ ಹಸ್ತಾಂತರಿಸುವ ನಿರೀಕ್ಷೆಯಿದೆ.
ಡಿಸೆಂಬರ್ 8 ರಂದು ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರು ತಮ್ಮ ಪತ್ನಿ ಮಧುಲಿಕಾ ರಾವತ್ ಹಾಗೂ ಸಲಹೆಗಾರ ಬ್ರಿಗೇಡಿಯರ್ ಎಲ್ ಎಸ್ ಲಿದ್ದಾರ್ ಅವರೊಂದಿಗೆ ಎಂಐವಿ-17 ನಲ್ಲಿ ಊಟಿ ಬಳಿಯ ವೆಲ್ಲಿಂಗ್ಟನ್ ನಲ್ಲಿರುವ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿಗೆ ಹೋಗುತ್ತಿದ್ದಾಗ ಹೆಲಿಕಾಪ್ಟರ್ ಇಳಿಯುವ ಏಳು ನಿಮಿಷಗಳ ಮೊದಲು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಜನರಲ್ ರಾವತ್ ಸೇರಿದಂತೆ ಹೆಲಿಕಾಪ್ಟರ್ ನಲ್ಲಿದ್ದ 14 ಮಂದಿ ಸಾವನ್ನಪ್ಪಿದ್ದಾರೆ. ಅಧಿಕೃತ ತನಿಖಾ ವರದಿ ಬಂದ ನಂತರಷ್ಟೇ ಅಪಘಾತಕ್ಕೆ ನಿಖರ ಕಾರಣ ತಿಳಿಯಲಿದ್ದು, ಇದುವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ ಹವಾಮಾನ ವೈಫರೀತ್ಯದಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.