ಹೈಲೈಟ್ಸ್:
- ದೇವಸ್ಥಾನಗಳಿಗೆ ಸ್ವಾಯತ್ತತೆ ನೀಡುವ ಬಗ್ಗೆ ನಳೀನ್ ಕುಮಾರ್ ಕಟೀಲ್ ಹೇಳಿಕೆ
- ಅಲ್ಪಸಂಖ್ಯಾತ ಮತಕ್ಕಾಗಿ ಹಿಂದೂ ಸಮಾಜಕ್ಕೆ ಕಾಂಗ್ರೆಸ್ನಿಂದ ದ್ರೋಹ
- ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್
ಕಾಂಗ್ರೆಸ್ ನವರು ಮತಾಂತರ ಕಾಯ್ದೆ, ಸಿಎಎ ಕಾಯ್ದೆ, ಈಗ ದೇವಸ್ಥಾನ ಸ್ವಾಯತ್ತೆಗೂ ವಿರೋಧ. ಅಲ್ಪಸಂಖ್ಯಾತ ಮತಕ್ಕಾಗಿ ಹಿಂದೂ ಸಮಾಜಕ್ಕೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ. ಕಾಂಗ್ರೆಸ್ ಗೆ ಹಿಂದೂ ಧರ್ಮ, ಹಿಂದೂ ಜನರ ಮೇಲೆ ನಂಬಿಕೆ ಇಲ್ಲ. ಬೊಮ್ಮಾಯಿ ನಿರ್ಧಾರ ಸರಿ ಇದೆ, ಎಲ್ಲಾ ಮಠಾಧೀಪತಿಗಳು, ದೇವಸ್ಥಾನದವರು ಇದನ್ನ ಸ್ವಾಗತಿಸಿದ್ದಾರೆ ಎಂದರು.
ಮತಾಂತರ ಮತ್ತು ದೇವಸ್ಥಾನ ವಿಚಾರದಲ್ಲಿ ಸರ್ಕಾರದ ನಿರ್ಧಾರ ನಾನು ಸ್ವಾಗತಿಸ್ತೇನೆ. ಸಿದ್ದರಾಮಯ್ಯ ಟೀಕೆ ಮಾಡ್ತಿದಾರೆ, ಆದ್ರೆ ಟಿಪ್ಪು ಜಯಂತಿ ಯಾರ ಓಲೈಕೆಗೆ ಮಾಡಿದ್ದು? ಶಾದಿ ಭಾಗ್ಯ ಯೋಜನೆಯಲ್ಲೂ ಅಲ್ಪಸಂಖ್ಯಾತರನ್ನ ಹುಡುಕಿ ಮತೀಯ ಭಾವನೆ ತಂದ್ರಿ. ಕಾಂಗ್ರೆಸ್ ಸಂಪೂರ್ಣ ಹಿಂದೂ ವಿರೋಧಿ ನೀತಿಯಲ್ಲಿದೆ. ಅಹಿಂದ ಚಳುವಳಿ ಮಾಡಿದ್ರಿ, ಆದ್ರೆ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ, ಪುಟ್ಟಪ್ಪ ಸತ್ತಾಗ ಏನ್ ಮಾಡಿದ್ರಿ? ಕಾಂಗ್ರೆಸ್ ನ ಈ ವಿರೋಧಿ ಧೋರಣೆಯನ್ನ ಹಿಂದೂ ಸಮಾಜ ತಿರಸ್ಕರಿಸುತ್ತದೆ ಎಂದು ಕಾಂಗ್ರೆಸ್ ವಿರುದ್ಧ ತೀವ್ರ್ ವಾಗ್ಧಾಳಿ ನಡೆಸಿದರು.
ಡಿಕೆ ಶಿವಕುಮಾರ್ ಸದಾ ಹಿಂದೂ ಭಕ್ತರ ವಿರುದ್ಧವೇ ಚಿಂತಿಸುತ್ತಾರೆ: ಬಸವರಾಜ ಬೊಮ್ಮಾಯಿ