ಈ ವೇಳೆ ಮಹಿಳೆ ‘ಅಣ್ಣ ನೀವು ಈ ರೀತಿ ಮಾತನಾಡಬಾರದು, ದಯವಿಟ್ಟು ಇಲ್ಲಿಂದ ಹೋಗಿ’ ಎಂದು ಹೇಳುತ್ತಿದ್ದಂತೆಯೇ, ಕಾಮುಕ ರಾಜಣ್ಣ ಏಕಾಏಕಿ ಎದ್ದು, ಮಹಿಳೆಯ ಕೈ ಹಿಡಿದು ಎಳೆದಾಡಿದ್ದಾನೆ. ಇದರಿಂದ ಗಾಬರಿಗೊಂಡ ಮಹಿಳೆ ರಕ್ಷಣೆಗಾಗಿ ಕಿರುಚಿಕೊಂಡಿದ್ದಾರೆ. ಮಹಿಳೆಯ ಚೀರಾಟ ಕೇಳಿ ಅಕ್ಕಪಕ್ಕದ ಮನೆಯವರು ಬರುವಷ್ಟರಲ್ಲೇ ರಾಜಣ್ಣ ಮನೆಯಿಂದ ಓಡಿ ಹೋಗಿದ್ದಾನೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಅತ್ಯಾಚಾರಿಗೆ ಜೈಲು ಶಿಕ್ಷೆ, 1.50 ಲಕ್ಷ ರೂ. ದಂಡ
ವಿಜಯಪುರ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಎಸಗಿದ ಆರೋಪಿಗೆ ಇಲ್ಲಿನ ಪೊಕ್ಸೊ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 1.50 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.
ಇಂಡಿ ತಾಲೂಕಿನ ಪಡನೂರ ಗ್ರಾಮದ ಆರೋಪಿ ಗಣಪತಿ ಭೀಮಾಶಂಕರ ವೀರಶೆಟ್ಟಿ ಶಿಕ್ಷೆಗೊಳಗಾದವ. ಈತ 2017ರ ಜೂ.16ರಂದು 16 ವರ್ಷದ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ತನ್ನ ತೋಟದ ವಸ್ತಿಯಲ್ಲಿ ಸುಮಾರು ಎರಡು ತಿಂಗಳವರೆಗೆ ಅತ್ಯಾಚಾರ ಎಸಗಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪೊಕ್ಸೊ ನ್ಯಾಯಾಲಯದ ನ್ಯಾಯಾಧೀಶೆ ಸವಿತಾ ಕುಮಾರಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 1.50 ರೂ. ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವಿ. ಜಿ. ಹಗರಗುಂಡ ವಾದ ಮಂಡಿಸಿದ್ದರು.