Karnataka news paper

‘ನಾಡ ಪೆದ ಆಶಾ’: ಕೋಲ್ಕತ್ತಾ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಕೊಡವ ಸಿನಿಮಾ


ಮಡಿಕೇರಿ: ಸಾಹಿತಿ ನಾಗೇಶ್ ಕಾಲೂರು ಕಾದಂಬರಿ ಆಧಾರಿತ, ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ ‘ನಾಡ ಪೆದ ಆಶಾ’ ಕೊಡವ ಚಲನಚಿತ್ರ 27ನೇ ಕೋಲ್ಕತ್ತಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ವಿಕೆತ್ರಿ ಪಿಕ್ಚರ್ಸ್ ನಿರ್ಮಾಣದಲ್ಲಿ ಈ ಚಿತ್ರವು ಮೂಡಿ ಬಂದಿತ್ತು.

ವಿಶ್ವದ ವಿವಿಧ ದೇಶಗಳ ಸಂಸ್ಕೃತಿ ಮತ್ತು ಆಚಾರ, ವಿಚಾರಗಳನ್ನು ಪ್ರತಿಬಿಂಬಿಸುವ ಚಲಚಿತ್ರಗಳ ಪ್ರದರ್ಶನಕ್ಕೆ ಪ್ರೋತ್ಸಾಹ ನೀಡುತ್ತಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಜ್ಯದಿಂದ ಕೊಡವ, ತುಳು ಮತ್ತು ಕೊಂಕಣಿ ಭಾಷೆಯ ಮೂರು ಚಿತ್ರಗಳಷ್ಟೇ ಆಯ್ಕೆಯಾಗಿವೆ. ಇದೇ ಜ.7ರಿಂದ 14ರವರೆಗೆ ಚಲನಚಿತ್ರೋತ್ಸವ ನಡೆಯಲಿದ್ದು, ಜ.11ರಂದು ರಬೀಂದ್ರ ಸದನ್ ಥಿಯೇಟರ್‌ನಲ್ಲಿ ‘ನಾಡ ಪೆದ ಆಶಾ’ ಪ್ರದರ್ಶನಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಕೊಟ್ಟುಕತ್ತಿರ ಪ್ರಕಾಶ್ ಅವರು ಮಾಹಿತಿ ನೀಡಿದ್ದಾರೆ.

ತಾವು ನಿರ್ದೇಶಿಸಿದ 12 ಚಿತ್ರಗಳಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿರುವ ಐದನೇ ಚಿತ್ರ ಇದಾಗಿದೆ. ಕೊಡಗಿನ ಸಂಸ್ಕೃತಿ, ಆಚಾರ, ವಿಚಾರ, ಪರಿಸರದ ಮೇಲೆ ಬೆಳಕು ಚೆಲ್ಲಿರುವ ಮತ್ತು ಸ್ವಾವಲಂಬಿ ಮಹಿಳೆಯೊಬ್ಬಳು ಸಮಾಜಮುಖಿಯಾಗಿ ಸೇವೆ ಸಲ್ಲಿಸುವ ಕಥಾಹಂದರದ ‘ನಾಡ ಪೆದ ಆಶಾ’ ಚಿತ್ರಕ್ಕೆ ವಿಶೇಷ ಗೌರವ ಸಿಕ್ಕಿರುವುದು ಮತ್ತಷ್ಟು ಚಿತ್ರಗಳ ನಿರ್ದೇಶನಕ್ಕೆ ಸ್ಫೂರ್ತಿ ದೊರೆತಂತಾಗಿದೆ. ಎಲ್ಲಾ ಕಲಾವಿದರು, ತಂತ್ರಜ್ಞರು, ರಚನೆಕಾರರು ಸೇರಿದಂತೆ ಇಡೀ ಚಿತ್ರತಂಡ, ಚಿತ್ರೀಕರಣಕ್ಕೆ ಸ್ಥಳಾವಕಾಶ ನೀಡಿದವರು ಹಾಗೂ ಎಲ್ಲಾ ಚಿತ್ರಾಭಿಮಾನಿಗಳ ನೆರವಿನಿಂದ ಈ ಯಶಸ್ಸು ಸಾಧ್ಯವಾಗಿದೆ. ಜಿಲ್ಲೆ ಮತ್ತು ಹೊರಜಿಲ್ಲೆಯ ಕೊಡವ ಸಮಾಜಗಳ ಸಹಕಾರದಿಂದ ನಾಡ ಪೆದ ಆಶಾ ಯಶಸ್ವಿ 123 ಪ್ರದರ್ಶನಗಳನ್ನು ಕಂಡಿದೆ ಎಂದು ಪ್ರಕಾಶ್ ಕಾರ್ಯಪ್ಪ ತಿಳಿಸಿದರು.

ಇದು ಕೊಡವ ಚಲಚಿತ್ರವಾದರೂ ಎಲ್ಲಾ ಜಾತಿ, ಮತ, ಭಾಷೆಯವರು ಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಪ್ರೋತ್ಸಾಹ ನೀಡಿದ್ದಾರೆ. ಇದೇ ಮಾರ್ಚ್‌ನಲ್ಲಿ ತಾವು ರಚಿಸಿರುವ ಕಾದಂಬರಿಯಾಧಾರಿತ ಚಿತ್ರ ‘ವಿಧಿರಕಳಿ’ ಸೆಟ್ಟೇರಲಿದೆ. ನಟ, ನಟಿಯರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಚಿತ್ರದಲ್ಲೂ ಕೊಡಗಿನ ಪರಿಸರ ಮತ್ತು ಸಂಸ್ಕೃತಿಯ ಅನಾವರಣಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

‘ನಾಡ ಪೆದ ಆಶಾ’ ಚಿತ್ರದ ನಿರ್ಮಾಪಕರಾಗಿ ಈರಮಂಡ ಹರಿಣಿ ವಿಜಯ್ ಹಾಗೂ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಕಾರ್ಯ ನಿರ್ವಹಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಪಾತ್ರದಲ್ಲಿ ಅಡ್ಡಂಡ ಅನಿತಾ ಕಾರ್ಯಪ್ಪ ಕಾಣಿಸಿಕೊಂಡಿದ್ದು, ನಾಯಕ ನಟನಾಗಿ ಬೊಳ್ಳಜಿರ ಬಿ.ಅಯ್ಯಪ್ಪ, ನಾಯಕಿಯಾಗಿ ನೆಲ್ಲಚಂಡ ರಿಶಿ ಪೂವಮ್ಮ, ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ, ಈರಮಂಡ ಹರಿಣಿ ವಿಜಯ್, ವಾಂಚಿರ ವಿಠಲ್ ನಾಣಯ್ಯ, ತಾತಂಡ ಪ್ರಭಾ ನಾಣಯ್ಯ, ಚೆರುವಾಳಂಡ ಸುಜಲಾ ನಾಣಯ್ಯ, ಅಜ್ಜಿಕುಟ್ಟಿರ ಪ್ರಥ್ವಿ ಸುಬ್ಬಯ್ಯ, ತೇಲಪಂಡ ಪವನ್ ತಮ್ಮಯ್ಯ, ಪುತ್ತರಿರ ಕರುಣ್ ಕಾಳಯ್ಯ, ಕೊಳ್‍ಮಾಡಂಡ ಸಾಬು ಮತ್ತು ತಾವರೆ, ಅಜ್ಜಮಾಡ ಪ್ರತೀಕ್, ಕೊಟ್ಟುಕತ್ತೀರ ಆರ್ಯ ದೇವಯ್ಯ, ಈರಮಂಡ ಕೇಸರಿ ಬೋಜಮ್ಮ, ಬೊಳ್ಳಜಿರ ಯಮುನಾ ಅಯ್ಯಪ್ಪ, ಬಟ್ಟೀರ ಕಾವೇರಿ ಜೋಯಪ್ಪ, ಮೊಣ್ಣಂಡ ನೇಹ ಮೋಟಯ್ಯ, ಮಾಚಂಗಡ ಶರತ್ ಬೋಪಣ್ಣ, ಕ್ಯಾಪ್ಟನ್ ಕಾಳಪಂಡ ಬೆಲ್ಲು ಬೋಪಯ್ಯ ತಾರಾಗಣದಲ್ಲಿದ್ದಾರೆ.



Read More…Source link

[wpas_products keywords=”deal of the day party wear for men wedding shirt”]