ಹೈಲೈಟ್ಸ್:
- ಸಿದ್ದರಾಮಯ್ಯ ವಿರುದ್ಧ ಎಚ್ಡಿ ಕುಮಾರಸ್ವಾಮಿ ವಾಗ್ಧಾಳಿ
- ಬೆನ್ನಿಗಿರಿದ ‘ಬ್ರೂಟಸ್’ ಯಾರು? ಎಂದು ಪ್ರಶ್ನಿಸಿದ ಎಚ್ಡಿಕೆ
- ಮಿಸ್ಟರ್ ಸಿದ್ದ ಸೂತ್ರಧಾರ ಎಂದು ಎಚ್ಡಿಕೆ ಲೇವಡಿ
ಜೆಡಿಎಸ್ ಬಿಜೆಪಿಯ ಬಿ ಟೀಂ ಅನ್ನುತ್ತೀರಿ. ಹಾಗಾದರೆ; ಆಡಳಿತ ಪಕ್ಷದಲ್ಲೇ ಕೂತು ವಿರೋಧಿಗಳೊಂದಿಗೆ ಕುಮ್ಮಕ್ಕಾಗಿ ಬೆನ್ನಿಗಿರಿದ ʼಬ್ರೂಟಸ್ʼ ಯಾರು? ಮೈತ್ರಿ ಸರಕಾರಕ್ಕೆ ಮೊದಲ ದಿನದಿಂದಲೇ ಮಹೂರ್ತ ಇಟ್ಟವರು ಯಾರು? ಸ್ವಯಂಘೋಷಿತ ಅಹಿಂದ ನಾಯಕರೇ ನಿಮ್ಮೊಳಗಿದೆ ಕಾರ್ಕೋಟಕ ‘ವಿಷ’. ಆ ವಿಷವೇ ನಿಮಗೆ ಮುಳುವು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಮಸ್ಯೆಗಳಿಗೆ ಉತ್ತರವಾಗಲಿ ಅಧಿವೇಶನ; ಮುಂದಿನ ಸಾಲಿನ ನಾಯಕರೆಲ್ಲರೂ ಕಿತ್ತೂರು-ಕಲ್ಯಾಣ ಕರ್ನಾಟಕದವರೇ!
ಅಹಾ!! ʼಕೋಲಾರದಲ್ಲಿ ಕಲರ್ಫುಲ್ ಸುಳ್ಳುಗಳ ಸರಮಾಲೆʼಯನ್ನೇ ಸೃಷ್ಟಿಸಿ ಕೃತಾರ್ಥರಾಗಿದ್ದೀರಿ. ʼಅಡ್ಜಸ್ಟ್ಮೆಂಟ್ ರಾಜಕಾರಣʼದ ಹರಿಕಾರರು ನೀವಲ್ಲವೇ? ವಿನಾಶಕಾಲೇ ವಿಪರೀತ ಸುಳ್ಳು!! ಎಂದು ಟ್ವೀಟ್ ಮೂಲಕ ದಾಳಿ ನಡೆಸಿದ್ದಾರೆ. ಅಧಿಕಾರಕ್ಕಾಗಿ ಜೆಡಿಎಸ್ ಮನೆ ಬಾಗಿಲಿಗೆ ನಾನು ಹೋಗಿಲ್ಲ. ಆದರೆ ಆಗ ಮಾತುಕತೆ ಆಗಿರುವುದು ನಿಜ ಎಂದು ಸಿದ್ದರಾಮಯ್ಯ ಕೋಲಾರದಲ್ಲಿ ಹೇಳಿಕೆ ಕೊಟ್ಟಿದ್ದರು.