Online Desk
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿರ್ಬಂಧವಿದೆ, ವೀಕೆಂಡ್ ಕರ್ಫ್ಯೂ ಇದೆ, ಕಾಂಗ್ರೆಸ್ ನಾಯಕರು ನಡೆಸಲು ಉದ್ದೇಶಿಸಿರುವ ಮೇಕೆದಾಟು ಪಾದಯಾತ್ರೆಯನ್ನು ಹಿಂಪಡೆಯುವ ಬಗ್ಗೆ ತೀರ್ಮಾನಿಸಲಿ ಎಂದು ಮುಖ್ಯಮಂತ್ರಿ ಸೇರಿದಂತೆ ಸರ್ಕಾರದ ಸಚಿವರುಗಳು ಎಷ್ಟೇ ಕೇಳಿಕೊಂಡರೂ ಕೇಳುತ್ತಿಲ್ಲ.
ಇದನ್ನೂ ಓದಿ: ‘ಇದು ಕೊರೋನಾ ಲಾಕ್ ಡೌನ್ ಅಲ್ಲ, ಬಿಜೆಪಿಯ ಲಾಕ್ ಡೌನ್, ನಮ್ಮದು ನೀರಿಗೋಸ್ಕರ ನಡಿಗೆ’: ಡಿ ಕೆ ಶಿವಕುಮಾರ್
ಪಾದಯಾತ್ರೆ ಮಾಡಿಯೇ ಸಿದ್ಧ ಎನ್ನುತ್ತಿದ್ದಾರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೋವಿಡ್ ನಿಯಮ ಮೀರಿದರೆ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ನಾವು ಅನುಮತಿ ತೆಗೆದುಕೊಂಡು ಪಾದಯಾತ್ರೆ ಮಾಡುತ್ತೇವೆ. ಕಾನೂನು ಕ್ರಮ ಉಲ್ಲಂಘಿಸುವುದಿಲ್ಲ ಎಂದು ಪುನರುಚ್ಛರಿಸಿದ್ದಾರೆ.
ನಾವು ಅನುಮತಿ ಪಡೆದು ಪ್ರತಿಭಟನೆ ಮಾಡುತ್ತಿಲ್ಲ. ನಾವು ನಿಯಮ ಬದ್ಧವಾಗಿಯೇ ಪಾದಯಾತ್ರೆ ಮಾಡುತ್ತೇವೆ. ಅವರು ಬೇಕಾದರೆ ಕ್ರಮ ಕೈಗೊಳ್ಳಲಿ. ಲೆಟ್ ದೆಮ್ ಟೇಕ್ ಆಕ್ಷನ್ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Read more
[wpas_products keywords=”deal of the day”]