ಹೈಲೈಟ್ಸ್:
- ಮತಾಂತರ ನಿಷೇಧ ಕಾಯ್ದೆ ತಂದು ದೇಶವಿಭಜನೆ ಮಾಡಬೇಡಿ
- ಬಲವಂತವಾಗಿ ಮತಾಂತರ ಮಾಡೋದು ತಪ್ಪು
- ಬೆಳಗಾವಿಯಲ್ಲಿ ಕೆಜೆ ಜಾರ್ಜ್ ಹೇಳಿಕೆ
ಈ ಕಾನೂನು ತರುವ ಮೂಲಕ ಕೆಲವರಿಗೆ ನೈತಿಕ ಪೊಲೀಸ್ಗಿರಿಗೆ ಅವಕಾಶ ಮಾಡಿಕೊಟ್ಟಂತೆ ಆಗಲಿದೆ. ಹಿಂದು ಧರ್ಮವಾಗ್ಲಿ ಅಥಾವ ಬೇರೆ ಧರ್ಮವಾಗ್ಲಿ ಶಕ್ತಿಯುಕ್ತವಾಗಿದೆ. ಮೊಗಲರು, ಡಚ್ಚರು, ಪೋರ್ಚುಗೀಸರು ಬಂದರು ಹಿಂದು ಧರ್ಮದ ಜನ ಸಂಖ್ಯೆ ಹೆಚ್ಚಿದೆ. ಕ್ರೈಸ್ತ ಸಮುದಾಯದ ಜನಸಂಖ್ಯೆ ಮೊದಲಗಿಂತ ಕಡಿಮೆ ಇದೆ. ರಾಜಕೀಯದ ದುರುದ್ದೇಶದಿಂದ ಈ ಕಾಯ್ದೆ ತರೋದಕ್ಕೆ ಹೊರಟಿದ್ದಾರೆ ಎಂದು ಆರೋಪಿಸಿದರು.
ಸಿಎಂ ಹಾಗೂ ಅವರ ಪಕ್ಷದವರಿಗೆ ವನಂತಿ ಮಾಡಿಕೊಳ್ಳುತ್ತೇನೆ. ಇಂಥ ಕಾಯ್ದೆ ತಂದು ದೇಶವಿಭಜನೆ ಮಾಡೋಕೆ ಹೊರಡಬೇಡಿ ಎಂದು ಕೆಜೆ ಜಾರ್ಜ್ ಹೇಳಿದರು.
ಮತಾಂತರ ನಿಷೇಧ ಕಾಯ್ದೆಯನ್ನು ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ನೇತೃತ್ವದ ಸರಕಾರ ಮಂಡಿಸುವ ಸಾಧ್ಯತೆ ಇದೆ. ಈ ಬಗ್ಗೆ ಬಿಜೆಪಿಯ ಪ್ರಮುಖ ನಾಯಕರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಮಸೂದೆ ಮಂಡಿಸದಂತೆ ವಿರೋಧ ವ್ಯಕ್ತಪಡಿಸಿದೆ. ಇದರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.
ಮತಾಂತರ ನಿಷೇಧ ಕಾಯ್ದೆಯಲ್ಲಿ ರಾಜಕೀಯ ದುರುದ್ದೇಶ ಇದೆ: ಸಿದ್ದರಾಮಯ್ಯ ಆಕ್ರೋಶ