ಬೆಂಗಳೂರು: ಕೋವಿಡ್ ಕಾರಣಕ್ಕೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ತರಗತಿಗಳು ನಡೆಯದ ಕಾರಣ ಈ ಅವಧಿಯಲ್ಲಿನ ಆಹಾರ ಧಾನ್ಯಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
1 ರಿಂದ 10ನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳನ್ನು ವಿತರಿಸುವಂತೆ ಸೂಚಿಸಲಾಗಿದೆ.
ಬಿಸಿಯೂಟದ ಬದಲಿಗೆ ಆಹಾರ ಭದ್ರತಾ ಕಾಯ್ದೆ– 2013 ಮತ್ತು ಮಧ್ಯಾಹ್ನ ಉಪಾಹಾರ ಯೋಜನೆ ನಿಯಮಗಳು– 2015ರ ಅನ್ವಯ ಈ ಕ್ರಮಕೈಗೊಳ್ಳುವಂತೆ
ಸೂಚಿಸಲಾಗಿದೆ.
ಸೆಪ್ಟೆಂಬರ್ ತಿಂಗಳಲ್ಲಿ 25 ದಿನಗಳು ಮತ್ತು ಅಕ್ಟೋಬರ್ ತಿಂಗಳಲ್ಲಿ 16 ದಿನಗಳ ಆಹಾರ ಧಾನ್ಯಗಳ ವಿತರಿಸಬೇಕು ಎಂದು ತಿಳಿಸಲಾಗಿದೆ.
Read more from source
[wpas_products keywords=”deal of the day sale today kitchen”]