Source : The New Indian Express
ನವದೆಹಲಿ: ಸಂಭವನೀಯ ಕೋವಿಡ್ ಮೂರನೇ ಅಲೆ ಉಲ್ಬಣ ಎದುರಿಸಲು ಆಸ್ಪತ್ರೆಯ ಮೂಲಸೌಕರ್ಯಗಳು ಸಿದ್ಧವಾಗಿರುವಂತೆ ನೋಡಿಕೊಳ್ಳುವಂತೆ ಮತ್ತು ನಿರ್ಣಾಯಕ ಔಷಧಿಗಳ ಸಾಕಷ್ಟು ದಾಸ್ತಾನು ಮಾಡಿಕೊಳ್ಳುವಂತೆ ಕೇಂದ್ರ ಸರ್ಕಾರ ಗುರುವಾರ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ತುರ್ತು ಪ್ರತಿಕ್ರಿಯೆ ಮತ್ತು ಆರೋಗ್ಯ ವ್ಯವಸ್ಥೆಯ ಸನ್ನದ್ಧತೆಯ ಪ್ಯಾಕೇಜ್ನ ವೆಚ್ಚವನ್ನು ಕೇಂದ್ರ ಮೇಲ್ವಿಚಾರಣೆ ಮಾಡುತ್ತಿದೆ. ರಾಜ್ಯ ಸರ್ಕಾರಗಳು ಹೊಂದಾಣಿಕೆಯ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಹೇಳಿದೆ.
ಇದನ್ನು ಓದಿ: ಕೋವಿಡ್-19: ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ನಿರ್ಬಂಧ ಜನವರಿ 31ರವರೆಗೆ ವಿಸ್ತರಣೆ
ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮಾತನಾಡಿ, ಕ್ಷೇತ್ರ ಮಟ್ಟದಲ್ಲಿ ವೆಂಟಿಲೇಟರ್ಗಳು, ಪಿಎಸ್ಎ ಪ್ಲಾಂಟ್ಗಳು, ಆಮ್ಲಜನಕ ಸಾಂದ್ರೀಕರಣ ಸೇರಿದಂತೆ ಎಲ್ಲಾ ಆರೋಗ್ಯ ಸೌಲಭ್ಯಗಳು ಹೊಂದಿವೆ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಕೇಂದ್ರ ಸರ್ಕಾರ ಪೂರೈಸಿದ ಅನೇಕ ವೆಂಟಿಲೇಟರ್ಗಳು ಇನ್ನೂ ಕೆಲವು ಆಸ್ಪತ್ರೆಗಳಲ್ಲಿ ಪ್ಯಾಕ್ ಓಪನ್ ಮಾಡದೆ ಮತ್ತು ಬಳಕೆಯಾಗದೆ ಬಿದ್ದಿವೆ ಎಂದು ಆರೋಗ್ಯ ಸಚಿವಾಲಯ ಗಮನಸೆಳೆದಿದೆ.
“ಎಲ್ಲಾ ಪಿಎಸ್ಎ ಆಮ್ಲಜನಕ ಸ್ಥಾವರಗಳು, ಆಮ್ಲಜನಕ ಸಾಂದ್ರೀಕರಣಗಳು ಮತ್ತು ವೆಂಟಿಲೇಟರ್ಗಳನ್ನು ಸ್ಥಾಪಿಸಲಾಗಿದೆ ಮತ್ತು ಕಾರ್ಯನಿರ್ವಹಿಸುತ್ತಿವೆ ಎಂದು ಖಚಿತಪಡಿಸಿಕೊಳ್ಳಲು ತಕ್ಷಣವೇ ಪರಿಶೀಲಿಸಬೇಕಾಗಿದೆ” ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಹೇಳಿದ್ದಾರೆ.