Karnataka news paper

2023ಕ್ಕೆ ರಾಜ್ಯದಲ್ಲಿ ಹೊಸ ಶಕ್ತಿಯೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ: ಯತ್ನಾಳ್ ಭವಿಷ್ಯ


ಹೈಲೈಟ್ಸ್‌:

  • ದುರ್ದೈವ ಅಂದ್ರೆ ರಾಜಕಾರಣದಲ್ಲಿ ನೇರವಾಗಿ ಮಾತನಾಡಬಾರದು
  • ಇಲ್ಲಿ ಚಮಚಾಗಿರಿ ಮಾಡಬೇಕು. ಆದರೆ, ನಾನು ಅದನ್ನು ಮಾಡೋದಿಲ್ಲ
  • ಅತಿವೃಷ್ಟಿ ಸಂಬಂಧ, ಸಾಮಾಜಿಕ ನ್ಯಾಯದ ಸಂಬಂಧ ನಾನು ಗುಡುಗಿದ್ದೇನೆ: ಯತ್ನಾಳ್

ಧಾರವಾಡ: 2023ಕ್ಕೆ ರಾಜ್ಯದಲ್ಲಿ ಬಿಜೆಪಿ ಹೊಸ ಶಕ್ತಿಯೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಪಂಚ ರಾಜ್ಯ ಚುನಾವಣೆ ನಡೆದಿದೆ. ಚುನಾವಣೆಯಲ್ಲಿ ಸ್ವಲ್ಪ ಹೆಚ್ಚೂ ಕಡಿಮೆ ಆಗಬಹುದು. ಆದರೆ, ಒಟ್ಟಾರೆ ಒಳ್ಳೆಯ ದಿನಗಳು ಬರಲಿವೆ ಎಂದರು.

ನಾನೇನೂ ರಾಜಕೀಯ ಜೋತಿಷಿ ಅಲ್ಲ. ಕಾಕತಾಳೀಯ ಎಂಬಂತೆ ನಾನು ಹೇಳಿದ್ದು ನಿಜವಾಗುತ್ತದೆ. 2023ಕ್ಕೆ ಬಿಜೆಪಿ ಹೊಸ ಶಕ್ತಿಯೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.

ಯತ್ನಾಳ್ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂಬ ಸ್ವಾಮೀಜಿಗಳ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ವಾಜಪೇಯಿ ಆಡಳಿತದಲ್ಲಿ ನಾನು ಮಂತ್ರಿ ಆಗಿದ್ದೆ. ನನ್ನಷ್ಟು ಯೋಗ್ಯತೆ, ಅರ್ಹತೆ ಬಿಜೆಪಿಯಲ್ಲಿ ಯಾರಿಗಿದೆ? ಸಚಿವ ಸಂಪುಟದಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದಕ್ಕಾಗಿ ವಾಜಪೇಯಿ ನನಗೆ ಪತ್ರ ಕೊಟ್ಟಿದ್ದಾರೆ. ಅಟಲ್‌ ಜೀ ಹಸ್ತಾಕ್ಷರದಿಂದ ಪತ್ರ ಪಡೆದ ವ್ಯಕ್ತಿ ನಾನಾಗಿದ್ದೇನೆ. ಆದರೆ, ದುರ್ದೈವ ಅಂದ್ರೆ ರಾಜಕಾರಣದಲ್ಲಿ ನೇರವಾಗಿ ಮಾತನಾಡಬಾರದು. ಇಲ್ಲಿ ಚಮಚಾಗಿರಿ ಮಾಡಬೇಕು. ಆದರೆ, ನಾನು ಅದನ್ನು ಮಾಡೋದಿಲ್ಲ. ಹೀಗಾಗಿಯೇ ನಾನು ಹಿಂದೆ ಉಳಿದಿದ್ದೇನೆ. ನಾನೋರ್ವ ಸಾಮಾನ್ಯ ಕಾರ್ಯಕರ್ತ. ಅತಿವೃಷ್ಟಿ ಸಂಬಂಧ, ಸಾಮಾಜಿಕ ನ್ಯಾಯದ ಸಂಬಂಧ ನಾನು ಗುಡುಗಿದ್ದೇನೆ, ಮಂತ್ರಿ ಮಾಡಿ, ಸಿಎಂ ಮಾಡಿ ಎಂದು ಗುಡುಗಿಲ್ಲ ಎಂದರು.

ಸುಮ್ಮನೆ ಜಾತ್ರೆಗಾಗಿ ಬೆಳಗಾವಿಯಲ್ಲಿ ಅಧಿವೇಶನ ಮಾಡಬೇಡಿ: ಯತ್ನಾಳ್ ಕಿಡಿ ನುಡಿ
2023ರ ಚುನಾವಣೆ ಸಂಬಂಧ ಬಿಜೆಪಿ ಹೈಕಮಾಂಡ್ ಏನೇ ನಿರ್ಣಯ ಕೈಗೊಂಡರೂ ನಾವು ಅದಕ್ಕೆ ಬದ್ಧ ಎಂದು ಯತ್ನಾಳ್ ಹೇಳಿದರು.

ಬೆಳಗಾವಿ ಅಧಿವೇಶನವನ್ನು ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಹಾಳು ಮಾಡಿದೆ. ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಆಗದಂತೆ ಮಾಡಿದೆ. ಸಿದ್ದರಾಮಯ್ಯನವರು ಎಂಟೆಂಟು ತಾಸು ಮಾತನಾಡುತ್ತಾರೆ. ಅವರ ಶಾಸಕರಿಗೂ ಅವರು ಅವಕಾಶ ಕೊಡುವುದಿಲ್ಲ. ಇದು ದೊಡ್ಡ ದುರಂತ. ಸಿದ್ದರಾಮಯ್ಯ ಹೇಳಿದ್ದನ್ನೇ ಹೇಳುತ್ತಾರೆ. ಅದೇ ಟಿಪ್ಪು ಸುಲ್ತಾನ್ ವರ್ಣನೆ ಮಾಡುತ್ತಾರೆ. ಅದು ಬಿಟ್ಟರೆ ಬೇರೆ ಅವರಿಗೆ ಗೊತ್ತಿಲ್ಲ. ಟಿಪ್ಪು ಸುಲ್ತಾನ್ ವರ್ಣನೆಯಲ್ಲೇ ಕಾಂಗ್ರೆಸ್ ಹಾಳಾಗುತ್ತಿದೆ. ಇದೀಗ ಪಾದಯಾತ್ರೆಯಲ್ಲೂ ಇವರ ಬಣ್ಣ ಬಯಲಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ಸಿಗರು ಫಿಲ್ಮ್ ಶೂಟಿಂಗ್‌ಗೆ ಹೊರಟಂತಿದೆ: ಯತ್ನಾಳ್ ವ್ಯಂಗ್ಯ
ಇದೇ ವೇಳೆ ಪಂಚಮಸಾಲಿ ಹೋರಾಟದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿಎಂ ಬೊಮ್ಮಾಯಿ ಅವರು ಸ್ಪಷ್ಟ ಭರವಸೆ ಕೊಟ್ಟಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡಬೇಕು ಎಂಬುದು ಅವರ ಮನಸ್ಸಿನಲ್ಲೂ ಇದೆ. ನಮ್ಮ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕೊಡಿ ಎಂದು ನಾವು ಕೇಳಿದ್ದೇವೆ. ಯಾರಿಗೂ ಅಂಜಿಕೆ, ಬೆದರಿಕೆ ಹಾಕಿಲ್ಲ. ಮೀಸಲಾತಿ ಕೊಡುವ ದಿಕ್ಕಿನಲ್ಲಿ ಬೊಮ್ಮಾಯಿ ಕೆಲಸ ಮಾಡುತ್ತಿದ್ದಾರೆ. ಬಜೆಟ್ ಪೂರ್ವದಲ್ಲಿ ಅವರು ನಮ್ಮ ಬೇಡಿಕೆ ಈಡೇರಿಸುವ ಭರವಸೆ ಇದೆ ಎಂದರು.

ಶಾಸಕ ಅರವಿಂದ ಬೆಲ್ಲದ ಅವರು ಸಚಿವರಾಗಲು ಅರ್ಹತೆ ಹೊಂದಿದ್ದಾರೆ. ನಾನು ಕೇಳುತ್ತಿರುವುದು ಎಲ್ಲ ಸಮುದಾಯಗಳಿಗೆ ನ್ಯಾಯ ಮಾತ್ರ. ಆ ನ್ಯಾಯ ಕೊಟ್ಟರೆ ಮಾತ್ರ ನಾನು ಸಚಿವ ಸಂಪುಟ ಸೇರುತ್ತೇನೆ ಎಂದರು.

ಸಿಎಂ ಬದಲಾವಣೆ ಬಗ್ಗೆ ಮಾತಾಡಿದರೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ; ಬಸನಗೌಡ ಯತ್ನಾಳ್‌



Read more

[wpas_products keywords=”deal of the day sale today offer all”]