Karnataka news paper

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಹಾರ ಸಿಎಂ ನಿತೀಶ್ ಕುಮಾರ್‌ಗೆ ಕೊರೊನಾ ಸೋಂಕು..


ಹೈಲೈಟ್ಸ್‌:

  • ಟ್ವಿಟರ್‌ನಲ್ಲಿ ಮಾಹಿತಿ ದೃಢಪಡಿಸಿದ ರಾಜನಾಥ್ ಸಿಂಗ್
  • ಬಿಹಾರ ಸಿಎಂ ಕಚೇರಿಯ ಪರಿಶೀಲಿಸಿದ ಟ್ವಿಟರ್ ಖಾತೆಯಿಂದಲೂ ಮಾಹಿತಿ
  • ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಉಭಯ ನಾಯಕರ ಸೂಚನೆ

ಹೊಸ ದಿಲ್ಲಿ: ದೇಶಾದ್ಯಂತ ಕೊರೊನಾ ವೈರಸ್ ಆರ್ಭಟ ತೀವ್ರಗೊಳ್ಳುತ್ತಿದೆ. ಕೋವಿಡ್ ಪಾಸಿಟಿವಿಟಿ ಪ್ರಮಾಣ ಗಣನೀಯವಾಗಿ ಏರಿಕೆ ಆಗುತ್ತಿದೆ. ಗಣ್ಯಾತಿಗಣ್ಯರಿಗೂ ಕೊರೊನಾ ಸೋಂಕು ತಗುಲುತ್ತಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಖುದ್ದು ರಾಜನಾಥ್ ಸಿಂಗ್ ಅವರೇ ಟ್ಟಿಟರ್ ಮೂಲಕ ಈ ವಿಚಾರ ದೃಢಪಡಿಸಿದ್ದಾರೆ.

ತಾವು ಕೊರೊನಾ ವೈರಸ್ ಸೋಂಕಿತರಾಗಿದ್ದು, ಸೋಮವಾರ ದೃಢಪಟ್ಟಿದೆ ಎಂದು ರಾಜನಾಥ್ ಮಾಹಿತಿ ನೀಡಿದ್ದಾರೆ. ತಮಗೆ ಕೊರೊನಾ ಸೋಂಕಿನ ಸೌಮ್ಯ ಲಕ್ಷಣಗಳಿದ್ದು, ಸದ್ಯ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ತಮ್ಮನ್ನು ಭೇಟಿಯಾದ, ತಮ್ಮ ಸಂಪರ್ಕಕ್ಕೆ ಬಂದ ಎಲ್ಲರೂ ಕೂಡಲೇ ಐಸೋಲೇಟ್ ಆಗಿ ಹಾಗೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ರಾಜನಾಥ್ ಸಿಂಗ್ ಮನವಿ ಮಾಡಿದ್ದಾರೆ.

ವೈದ್ಯರಲ್ಲಿ ಕೋವಿಡ್ ಸೋಂಕು: ಶಸ್ತ್ರಚಿಕಿತ್ಸೆ ನಡೆಸಲು ಆಸ್ಪತ್ರೆಗಳಲ್ಲಿ ಸರ್ಜನ್‌ಗಳೇ ಇಲ್ಲ!
ರಾಜನಾಥ್ ಸಿಂಗ್ ಅವರಿಗೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಧರ್ಮೇಂದ್ರ ಪ್ರದಾನ್ ಸೇರಿದಂತೆ ಹಲವು ಗಣ್ಯರು ಶೀಘ್ರದಲ್ಲೇ ಗುಣಮುಖರಾಗಿ ಎಂದು ಶುಭ ಹಾರೈಸಿದ್ದಾರೆ.

3 ತಿಂಗಳಲ್ಲಿ ಕೋವಿಡ್‌ ಆರ್ಭಟ ಅಂತ್ಯ..! ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಕಡಿಮೆ..
ಇನ್ನೊಂದೆಡೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೂ ಕೂಡಾ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಬಿಹಾರ ಮುಖ್ಯಮಂತ್ರಿಗಳ ಪರಿಶೀಲಿಸಿದ ಟ್ವಿಟ್ಟರ್ ಖಾತೆಯಿಂದ ಈ ವಿಚಾರ ಪ್ರಕಟಿಸಲಾಗಿದೆ.

ಸದ್ಯ ನಿತೀಶ್ ಕುಮಾರ್ ಅವರು ವೈದ್ಯರ ಸಲಹೆ ಮೇರೆಗೆ ಹೋಂ ಐಸೋಲೇಷನ್‌ನಲ್ಲಿ ಇದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ, ಐಸೋಲೇಷನ್ ಆಗುವಂತೆ ನಿತೀಶ್ ಕುಮಾರ್ ಸಲಹೆ ನೀಡಿದ್ದಾರೆ. ಅಷ್ಟೇ ಅಲ್ಲ, ಕೊರೊನಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಮನವಿ ಮಾಡಿದ್ದಾರೆ.

402 ಸಂಸತ್ ಸಿಬ್ಬಂದಿಗೆ ಕೊರೊನಾ ವೈರಸ್ ಪಾಸಿಟಿವ್: ಬಜೆಟ್ ಅಧಿವೇಶನಕ್ಕೆ ತೊಡಕು?



Read more

[wpas_products keywords=”deal of the day sale today offer all”]