Karnataka news paper

ಶೀಘ್ರದಲ್ಲೇ ಸಂಪುಟ ವಿಸ್ತರಣೆ, ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಸಚಿವೆ ಶಶಿಕಲಾ ಜೊಲ್ಲೆ


ಹೈಲೈಟ್ಸ್‌:

  • ಇನ್ನೂ ಎರಡ್ಮೂರು ಖಾತೆ ಕೊಡಬೇಕಿದೆ, ಅವುಗಳ ಹಂಚಿಕೆಯಾಗಲಿದೆ
  • ಎರಡು ಮೂರು ದಿನಗಳಲ್ಲಿ ಪೂರ್ಣ ಪ್ರಮಾಣದ ಉಸ್ತುವಾರಿ ಸಚಿವರ ನೇಮಕ ಆಗಲಿದೆ
  • ರಾಜ್ಯ ಸರಕಾರದಲ್ಲಿ ಅಸಮರ್ಥ ಸಚಿವರು ಅಂತ ಯಾರೂ ಇಲ್ಲ:ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಜರಾಯಿ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೊರೊನಾ ನಿಯಂತ್ರಣ ಕುರಿತು ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾತನಾಡಿದ ಸಚಿವರು, ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾವುದೇ ತೊಂದರೆ ಆಗುವುದಿಲ್ಲ. ಈ ಬಗ್ಗೆ ಊಹಾಪೋಹಗಳು ಏನಿಲ್ಲ ಎಂದು ತಿಳಿಸಿದರು.

ಇನ್ನೂ ಎರಡ್ಮೂರು ಖಾತೆ ಕೊಡಬೇಕಿದೆ. ಅವುಗಳ ಹಂಚಿಕೆಯಾಗಲಿದೆ. ರೆಗ್ಯೂಲರ್ ಜಿಲ್ಲಾ ಉಸ್ತುವಾರಿ ಯಾರಿಗೂ ಇಲ್ಲ ಸಚಿವೆ ಜೊಲ್ಲೆ ತಿಳಿಸಿದರು. ಕೋವಿಡ್ ಮತ್ತು ಪ್ರವಾಹದ ವಿಷಯದಲ್ಲಿ ಮಾತ್ರ ಈವರೆಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಲಾಗಿದೆ. ಮುಂಬರುವ ಎರಡು ಮೂರು ದಿನಗಳಲ್ಲಿ ಪೂರ್ಣ ಪ್ರಮಾಣದ ಉಸ್ತುವಾರಿ ಸಚಿವರ ನೇಮಕ ಆಗಲಿದೆ ಎಂದು ಅವರು ಹೇಳಿದರು. ರಾಜ್ಯ ಸರಕಾರದಲ್ಲಿ ಅಸಮರ್ಥ ಸಚಿವರು ಅಂತ ಯಾರೂ ಇಲ್ಲ. ಎಲ್ಲರೂ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದರು.

ತಮ್ಮ ವಿರುದ್ಧ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವೆ ಶಶಿಕಲಾ ಜೊಲ್ಲೆ, ಧ್ವಜ ಹಾರಿಸಲು ಮತ್ತು ಕೋವಿಡ್ ಸಭೆಗೆ ಮಾತ್ರ ಸಚಿವರು ಬರ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿರುವುದರಲ್ಲಿ ಸತ್ಯಾಂಶವಿದೆ. ಯಾವುದೇ ಜಿಲ್ಲೆಗಳಿಗೆ ಈವರೆಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿಲ್ಲ ಎಂದು ಹೇಳಿದರು.

ಸರ್ಕಾರದ ಯೋಜನೆಗಳು ರೈತರನ್ನು ತಲುಪಿವೆ, ಬಿಜೆಪಿ ಅಭ್ಯರ್ಥಿ ಗೆಲ್ತಾರೆ: ಸಚಿವೆ ಶಶಿಕಲಾ ಜೊಲ್ಲೆ
ಈವರೆಗೆ ಕೇವಲ ಕೋವಿಡ್ ಮತ್ತು ಪ್ರವಾಹ ಉಸ್ತುವಾರಿಗಾಗಿ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ನೀಡಲಾಗಿದೆ. ಯಾರೊಬ್ಬ ಸಚಿವರಿಗೂ ಸಂಪೂರ್ಣವಾಗಿ ಜಿಲ್ಲಾ ಉಸ್ತುವಾರಿ ನೀಡಿಲ್ಲ ಎಂದು ಶಶಿಕಲಾ ಜೊಲ್ಲೆ ತಿಳಿಸಿದರು. ನನಗೆ ಜನರು ಉಸ್ತುವಾರಿ ಸಚಿವರು ಎಂದುಕೊಂಡು ಕರೆ ಮಾಡಿದಾಗ ಸ್ಪಂದಿಸಿದ್ದೇನೆ ಎಂದೂ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಇದಕ್ಕೂ ಮೊದಲು ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು, ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಅಲ್ಲದೇ, ಸರಕಾರ ಕೈಗೊಂಡಿರುವ ಕ್ರಮಗಳು ಹಾಗೂ ನೀಡಿರುವ ನಿರ್ದೇಶನಗಳನ್ನು ಸಮರ್ಥವಾಗಿ ಜಾರಿಗೊಳಿಸಬೇಕು ಎಂದು ಸೂಚನೆ ನೀಡಿದರು. ಅಲ್ಲದೇ, ಮಹಾರಾಷ್ಟ್ರದ ಗಡಿಯಲ್ಲಿ ಬರುವ 11 ಚೆಕ್‌ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉತ್ತರ ಕರ್ನಾಟಕದ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಕಾರ್ಯಸೂಚಿ ರಚಿಸಲು ಶಶಿಕಲಾ ಜೊಲ್ಲೆ ಸೂಚನೆ
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಜಿಲ್ಲಾ ಪಂಚಾಯಿತಿ ಸಿ ಇ ಓ ಗೋವಿಂದ ರೆಡ್ಡಿ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಲಕ್ಕಣ್ಣವರ, ಸಿಂದಗಿ ಶಾಸಕ ರಮೇಶ ಭೂಸನೂರ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ವಿಜಯಪುರ ಡಿವೈಎಸ್ಪಿ ಕೆ. ಸಿ. ಲಕ್ಷ್ಮಿನಾರಾಯಣ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆ ಬಳಿಕ ಮಹಾರಾಷ್ಟ್ರದ ಗಡಿಯಲ್ಲಿರುವ ಚೆಕ್ ಪೋಸ್ಟ್ ಗಳಿಗೆ ತೆರಳಿದ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯ ಪ್ರವೇಶಿಸುವವರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧ : ವಿಜಯಪುರದಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ



Read more

[wpas_products keywords=”deal of the day sale today offer all”]