ದೆಹಲಿ ಕಚೇರಿಯ ಐವರು ಸಿಬ್ಬಂದಿ ಸೇರಿದಂತೆ ಕಾರ್ಯದರ್ಶಿಗಳಿಗೆ ಕೂಡಾ ಕೊರೋನಾ ಪಾಸಿಟಿವ್ ಆಗಿದ್ದು ಅವರೆಲ್ಲ ಹೋಮ್ ಐಸೋಲೇಷನ್ನಲ್ಲಿದ್ದು ಸುಧಾರಿಸಿಕೊಳ್ಳುತ್ತಿದ್ದಾರೆ. ಹಿರಿಯ ನಾಗರಿಕರು ಸೇರಿದಂತೆ ಅರ್ಹರಿರುವ ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕೆಂದು ಈ ಸಂದರ್ಭದಲ್ಲಿ ಅವರು ಮನವಿ ಮಾಡಿರುವುದಾಗಿ ಖರ್ಗೆ ಅವರ ಕಾರ್ಯದರ್ಶಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಕಳೆದೆರಡು ದಿನಗಳಿಂದ ಖರ್ಗೆ ಅವರೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಲಾಗಿದೆ.
ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯ ಕಾಂಗ್ರೆಸ್ ಆಯೋಜಿಸಿರುವ ಮೇಕೆದಾಟು ಪಾದಯಾತ್ರೆ ಹೋರಾಟದಲ್ಲೂ ಭಾಗಿಯಾಗಿದ್ದರು. ಖರ್ಗೆ ಅವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿರುವುದರಿಂದ ಅವರು ಶೀಘ್ರ ಗುಣಮುಖರಾಗಲೆಂದು ರಾಜಕೀಯ ಮುಖಂಡರು ಸೇರಿದಂತೆ ಅನೇಕರು ಹಾರೈಸುತ್ತಿದ್ದಾರೆ.
Read more
[wpas_products keywords=”deal of the day sale today offer all”]