Karnataka news paper

ವೈಕುಂಠ ಏಕಾದಶಿ: ವೆಂಕಟೇಶ್ವರ ದೇಗುಲಗಳಲ್ಲಿ ವಿಶೇಷ ಆಚರಣೆ, ಕೊರೋನಾ ನಿಯಮ ಮಧ್ಯೆ ಸೀಮಿತ ಸಂಖ್ಯೆಯಲ್ಲಿ ಭಕ್ತರಿಗೆ ದರ್ಶನ


Online Desk

ಬೆಂಗಳೂರು: ವೈಕುಂಠ ಏಕಾದಶಿ (Vaikunta Ekadashi) ಹಿನ್ನೆಲೆಯಲ್ಲಿ ರಾಜ್ಯದ  ವೆಂಕಟೇಶ್ವರ, ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜಾ-ಕೈಂಕರ್ಯಗಳು ಹಾಗೂ ಇತರ ದೇವಾಲಯಗಳಲ್ಲಿ ಕೂಡ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಕೊರೋನಾ-ಓಮಿಕ್ರಾನ್ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರ ಮಧ್ಯೆ ವೈಕುಂಠ ಏಕಾದಶಿ ಸಂಭ್ರಮ ಹೆಚ್ಚಾಗಿದೆ.

ಬೆಂಗಳೂರಿನ ವೈಯಾಲಿಕಾವಲ್​​ನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಮಧ್ಯರಾತ್ರಿ 1:30 ಕ್ಕೆ ದೇಗುಲವನ್ನು ತೆರೆಯಲಾಗಿದೆ.  ಸುಪ್ರಭಾತ, ತೋಮಾಲ ಸೇವಾ, 3 ಗಂಟೆಗೆ ಮೊದಲ ನೈವೇದ್ಯ, 4 ಗಂಟೆಗೆ ಅಸ್ತನಾಮ್ ಪೂಜೆ, ವೈಕುಂಠ ದ್ವಾರ ಪೂಜೆ , 5 ಗಂಟೆಗೆ ವೈಕುಂಠ ದ್ವಾರ ತೆರೆಯಲಾಗಿದೆ. ವೈಯ್ಯಾಲಿಕಾವಲ್​​ನ ವೆಂಕಟೇಶ್ವರ ದೇವಾಲಯದಲ್ಲಿ ವೈಕುಂಠ ಏಕಾದಶಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ.

ಭಕ್ತರ ಆಗಮನ: ವೆಂಕಟೇಶ್ವರನ ಸನ್ನಿಧಾನಕ್ಕೆ ಭಕ್ತರು ದೇವಾಲಯಕ್ಕೆ ಆಗಮಿಸಿದ್ದಾರೆ. ಕೋವಿಡ್ ನಿಯಮದ ಪ್ರಕಾರ ದೇವರ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ಒಂದು ಸಲ 50 ಜನರಿಗೆ ಮಾತ್ರ ದೇವಾಲಯಕ್ಕೆ ಪ್ರವೇಶ ನೀಡಲಾಗಿದೆ. ಕೋವಿಡ್ ನಿಯಮಾವಳಿಗಳನ್ನು ಪಾಲಿಸುವಂತೆ ದೇವಾಲಯಗಳು ಭಕ್ತರಲ್ಲಿ ಮನವಿ ಮಾಡಿವೆ. 





Read more

[wpas_products keywords=”deal of the day”]