Karnataka news paper

ನಗರದಲ್ಲಿ ಅಗ್ನಿ ಅವಘಡ; ಮುಂಜಾನೆ ಹೊತ್ತಿ ಉರಿದ ಶಾಪಿಂಗ್ ಮಾಲ್


Online Desk

ಬೆಂಗಳೂರು: ನಗರದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಶಾಪಿಂಗ್ ಮಾಲ್ ಒಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶನಿವಾರ ನಡೆದಿದೆ.

ಅರಕೆರೆ ಗೇಟ್ ಬಳಿಯ ‘ಸೌಥ್ ಇಂಡಿಯಾ ಮಾಲ್​’ನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ದಿಢೀರ್ ಎಂದು ಕಾಣಿಸಿಕೊಂಡ ಬೆಂಕಿ ನೋಡ ನೋಡುತ್ತಿದ್ದಂತೆ ತನ್ನ ಕೆನ್ನಾಲಿಗೆಯನ್ನು ಇತರೆಡೆ ಹರಡಲು ಆರಂಭಿಸಿತು. ಪರಿಣಾಮ ಮಾಲ್​ನಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟುಕರಕಲಾಗಿವೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಆರು ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿಯನ್ನ ನಿಯಂತ್ರಣಕ್ಕೆ ತಂದರು. ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿತ್ತು ಎಂಬ ಶಂಕೆಗಳು ವ್ಯಕ್ತವಾಗಿದೆ.



Read more

[wpas_products keywords=”deal of the day”]