Karnataka news paper

ಚುನಾವಣೆ ಸಮೀಪದಲ್ಲಿಯೇ ಇ.ಡಿ ಶಾಕ್: ಮರಳು ದಂಧೆ ಆರೋಪದಲ್ಲಿ ಪಂಜಾಬ್ ಸಿಎಂ ಚನ್ನಿ ಸಂಬಂಧಿ ಮೇಲೆ ದಾಳಿ


ಹೈಲೈಟ್ಸ್‌:

  • ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಸಂಬಂಧಿ ಮೇಲೆ ಇ.ಡಿ ದಾಳಿ
  • ಅಕ್ರಮ ಮರಳು ಗಣಿಗಾರಿಕೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ ಪರಿಶೀಲನೆ
  • ಭೂಪಿಂದರ್ ಸಿಂಗ್ ಹಾಗೂ ಇತರರಿಗೆ ಸೇರಿದ ಹತ್ತು ಸ್ಥಳಗಳ ಮೇಲೆ ದಾಳಿ
  • ಪಂಜಾಬ್ ವಿಧಾನಸಭೆ ಚುನಾವಣೆ ಸಮೀಪದಲ್ಲಿ ಮರಳು ದಂಧೆ ಮೇಲೆ ಕಣ್ಣು

ಹೊಸದಿಲ್ಲಿ: ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರ ಸಂಬಂಧಿ ಹಾಗೂ ಇತರರ ಮೇಲೆ ಅಕ್ರಮ ಮರಳು ಗಣಿಗಾರಿಕೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ ಮಂಗಳವಾರ ದಾಳಿ ನಡೆಸಿದೆ. ಪಂಜಾಬ್ ವಿಧಾನಸಭೆ ಚುನಾವಣೆಗೆ ಒಂದು ತಿಂಗಳು ಬಾಕಿ ಇರುವಾಗ ಈ ದಾಳಿ ನಡೆದಿದೆ.

ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಅವರ ಮನೆ ಹಾಗೂ ಇತರೆ 10 ಸ್ಥಳಗಳ ಮೇಲೆ ಮಂಗಳವಾರ ಮುಂಜಾನೆ ಇ.ಡಿ (ED) ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಜಾರಿ ನಿರ್ದೇಶನಾಲಯವು ರಾಜಕೀಯ ನಂಟು ಹೊಂದಿರುವ ಅನೇಕ ಜನರ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತಿಹಾಸದಲ್ಲಿ ಮೊದಲ ಬಾರಿ ಜನರಿಂದಲೇ ಆಯ್ಕೆ: ಭಗವಂತ್ ಮನ್ ಎಎಪಿಯ ಪಂಜಾಬ್ ಸಿಎಂ ಅಭ್ಯರ್ಥಿ
ಚಂಡೀಗಡ ಮತ್ತು ಮೊಹಾಲಿಯ 10-12 ಸ್ಥಳಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳಿ ಗಣಿಗಾರಿಕೆಗಳಿಗೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರು 2018ರಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಕೆಲವು ಕಂಪೆನಿಗಳು ಮತ್ತು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲು ಮಾಡಲಾಗಿತ್ತು. ಭೂಪಿಂದರ್ ಸಿಂಗ್ ಹನಿ ಅವರ ಅಕ್ರಮ ದಂಧೆಗೂ ಚನ್ನಿ ಅವರಿಗೂ ನಂಟು ಇದೆ ಎಂದು ವಿರೋಧಪಕ್ಷಗಳು ಆರೋಪಿಸಿದ್ದವು.

ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆಗೆ ಪ್ರಚಾರ ಚುರುಕುಗೊಂಡಿದ್ದು, ಅದರ ನಡುವೆಯೇ ಈ ದಾಳಿಗಳು ನಡೆದಿವೆ. ರಾಜ್ಯದಲ್ಲಿ ಫೆಬ್ರವರಿ 20ರಂದು ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆ ಸಮೀಪದಲ್ಲಿ ನಡೆದಿರುವ ಈ ದಾಳಿ ಆಡಳಿತಾರೂಢ ಕಾಂಗ್ರೆಸ್‌ ಪಕ್ಷಕ್ಕೆ ಮುಜುಗರ ಉಂಟುಮಾಡಲಿದ್ದು, ಕೇಂದ್ರ ಸರ್ಕಾರ ಮತ್ತು ಕಾಂಗ್ರೆಸ್ ವಾಕ್ಸಮರಕ್ಕೆ ಮತ್ತೊಂದು ವೇದಿಕೆ ನೀಡಿದೆ.

ಪಂಜಾಬ್ ಚುನಾವಣಾ ಪ್ರಚಾರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಪ್ರಮುಖ ಚರ್ಚೆಯ ವಿಚಾರಗಳಲ್ಲಿ ಒಂದಾಗಿದೆ. ಈ ಅಕ್ರಮ ವ್ಯಾಪಾರಕ್ಕೆ ಕಾಂಗ್ರೆಸ್ ನಂಟು ಇದೆ ಎಂದು ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಆರೋಪಿಸಿದ್ದರು.
ಪಂಜಾಬ್ ಮುಖ್ಯಮಂತ್ರಿ ಚನ್ನಿ ಸಹೋದರನಿಂದಲೇ ಕಾಂಗ್ರೆಸ್‌ಗೆ ಬಂಡಾಯದ ಬಿಸಿ
ಸೆಪ್ಟೆಂಬರ್‌ನಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಂಡ ಬಳಿಕ ಕಾಂಗ್ರೆಸ್ ತೊರೆದಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್, ಕಾಂಗ್ರೆಸ್‌ನ ಎಲ್ಲ ಶಾಸಕರೂ ಅಕ್ರಮ ಮರಳು ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದರು. ‘ನಾನು ಹೆಸರು ಹೇಳಲು ಆರಂಭಿಸಿದರೆ ಮೇಲಿನಿಂದ ಬರಬೇಕು’ ಎಂದು ಕಳೆದ ತಿಂಗಳು ಹೇಳಿಕೆ ನೀಡಿದ್ದರು.

ಶಾಸಕರು ಮರಳು ದಂಧೆಯಲ್ಲಿ ಪಾಲ್ಗೊಂಡಿರುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಮಾಹಿತಿ ನೀಡಲಾಗಿತ್ತು ಎಂದು ಕ್ಯಾಪ್ಟನ್ ಹೇಳಿದ್ದರು. ಪಂಜಾಬ್ ವಿಧಾನಸಭೆ ಚುನಾವಣೆಯನ್ನು ಚುನಾವಣಾ ಆಯೋಗ ಆರು ದಿನಗಳ ಮಟ್ಟಿಗೆ ಮುಂದೂಡಿದೆ. ಜನವರಿ 20ರಂದು ಚುನಾವಣೆ ನಡೆಸಬೇಕು ಎಂದು ಸಿಎಂ ಚನ್ನಿ ಅವರ ಕೋರಿಕೆಯನ್ನು ಅದು ಪರಿಗಣಿಸಿದೆ.



Read more

[wpas_products keywords=”deal of the day sale today offer all”]