ಹೈಲೈಟ್ಸ್:
- ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಪುಟ್ಟ ಕಂದ ಸಮನ್ವಿ
- ಸಮನ್ವಿ ನಿಧನಕ್ಕೆ ಸಂತಾಪ ಸೂಚಿಸಿದ್ದ ಡಿ.ಕೆ. ಶಿವಕುಮಾರ್
- ಇಂದು (ಜ.18) ಸಮನ್ವಿ ಪೋಷಕರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದ ಡಿ.ಕೆ. ಶಿವಕುಮಾರ್
ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಸಮನ್ವಿ ಚಿಕ್ಕ ವಯಸ್ಸಿನಲ್ಲೇ ಸಾಂಸ್ಕೃತಿಕ ಕ್ಷೇತ್ರದಿಂದ ಜನರ ಮನಗೆದ್ದು ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಳು. ಚಿಕ್ಕ ವಯಸ್ಸಿನಲ್ಲಿ ಇಂತಹ ಪ್ರತಿಭೆ ಎಲ್ಲರಿಗೂ ಸಿಗುವುದಿಲ್ಲ. ಆಕೆಗೆ ಇಷ್ಟು ಸಣ್ಣ ವಯಸ್ಸಿನಲ್ಲೇ ಈ ರೀತಿ ಆಗಬಾರದಿತ್ತು. ಯಮ ನಿಷ್ಕರುಣಿ. ಆಕೆಯ ತಂದೆ ನನಗೆ ತುಂಬಾ ಪರಿಚಯ. ನಾವೆಲ್ಲ ವಿದ್ಯಾರ್ಥಿ ಕಾಲದಿಂದಲೂ ಪರಿಚಿತರು. ಈ ಸಮಯದಲ್ಲಿ ವೈಯಕ್ತಿಕವಾಗಿ ಹಾಗೂ ಪಕ್ಷದ ಅಧ್ಯಕ್ಷನಾಗಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಚಿಕ್ಕ ವಯಸ್ಸಿನಲ್ಲೇ ಅದ್ಭುತ ಪ್ರತಿಭೆಯೊಂದು ಮಾಯವಾಗಿದೆ. ಆಕೆಯ ತಂದೆ, ತಾಯಿ ಬಹಳ ನೋವಿನಲ್ಲಿದ್ದು, ಧೈರ್ಯ ಕಳೆದುಕೊಳ್ಳಬೇಡಿ ಎಂದು ಹೇಳಿದ್ದೇನೆ. ಇದು ಬಹಳ ದುಃಖಕರ ಸಮಯ. ಅವರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದರು.
ನಂತರ ಈ ಬಗ್ಗೆ ಟ್ವೀಟ್ ಮಾಡಿದ ಡಿ.ಕೆ. ಶಿವಕುಮಾರ್, ‘ಅರಳಿ ನಗಬೇಕಿದ್ದ ಹೂವೊಂದು ಮೊಗ್ಗಿನಲ್ಲೇ ದೇವರಿಗೆ ಅರ್ಪಣೆಯಾಗಿದೆ. ಖ್ಯಾತ ಹರಿಕಥಾ ವಿದ್ವಾಂಸ ಶ್ರೀ ಗುರುರಾಜ ನಾಯ್ಡು ಅವರ ಮೊಮ್ಮಗಳು ಸಮನ್ವಿ ಪ್ರತಿಭಾವಂತೆ ಭವಿಷ್ಯದಲ್ಲಿ ಉತ್ತಮ ಕಲಾವಿದೆಯಾಗುವ ಭರವಸೆಹುಟ್ಟಿಸಿದ್ದಳು. ಆಕೆಯ ಅಗಲಿಕೆ ಕಲಾ ರಂಗಕ್ಕೆ ತುಂಬಲಾರದ ನಷ್ಟ. ಇಂದು ಸಮನ್ವಿ ಅವರ ಮನೆಗೆ ಭೇಟಿ ನೀಡಿ ಅವರ ಪೋಷಕರಿಗೆ ಧೈರ್ಯ ಹೇಳಿದೆ’ ಎಂದು ಬರೆದುಕೊಂಡಿದ್ದಾರೆ.

ಸಮನ್ವಿ ನಿಧನಕ್ಕೆ ಕಂಬನಿ ಮಿಡಿದ ಅನು ಪ್ರಭಾಕರ್; ‘ದೇವರು ಇದ್ದಾನೋ, ಇಲ್ಲವೋ’ ಎಂದ ಸೃಜನ್ ಲೋಕೇಶ್
ಸಮನ್ವಿ ನಿಧನಳಾದಾಗಲೂ ಟ್ವೀಟ್ ಮಾಡಿದ್ದ ಡಿ.ಕೆ. ಶಿವಕುಮಾರ್, ‘ಹೆತ್ತ ಮಕ್ಕಳನ್ನು ಕಳೆದುಕೊಳ್ಳುವುದಕ್ಕಿಂತ ಬೇರೆ ನೋವು ಇನ್ಯಾವುದೂ ಇಲ್ಲ. ಕಿರುತೆರೆ ನಟಿ ಶ್ರೀಮತಿ ಅಮೃತಾ ನಾಯ್ಡು ಅವರ 6 ವರ್ಷದ ಪುಟ್ಟ ಕಂದಮ್ಮ ಸಮನ್ವಿ ಇನ್ನಿಲ್ಲ ಎನ್ನುವ ಸುದ್ದಿ ಮನಸ್ಸಿಗೆ ಅಪಾರ ನೋವುಂಟು ಮಾಡಿದೆ. ಆಕೆಯ ಸಾವಿನ ನೋವು ಸಹಿಸುವ ಶಕ್ತಿಯನ್ನು ಕುಟುಂಬಕ್ಕೆ ದೇವರು ಕರುಣಿಸಲಿ. ಸಮನ್ವಿ ನಮ್ಮೆಲ್ಲರ ಹೃದಯದಲ್ಲಿ ನೀನು ಅಮರ’ ಎಂದು ಬರೆದುಕೊಂಡಿದ್ದರು.
ಅಪಘಾತದಲ್ಲಿ ಸಾವನ್ನಪ್ಪಿದ ‘ನನ್ನಮ್ಮ ಸೂಪರ್ ಸ್ಟಾರ್’ ಸ್ಪರ್ಧಿ 6 ವರ್ಷದ ಸಮನ್ವಿ
Read more
[wpas_products keywords=”deal of the day party wear dress for women stylish indian”]