ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಸಾವು- ನೋವು ಸಂಭವಿಸಿಲ್ಲ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ವಿ.ವಿ.ಪುರಂ ಪೊಲೀಸರು ದೌಡಾಯಿಸಿ ಪರಿಶೀಲಿಸಿದರು. ಚಾಲಕನ ಪ್ರಕಾರ ಬ್ಯಾಟರಿಯ ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದರು.
ಟಾಟಾ ಏಸ್ ವಾಹನಕ್ಕೆ ಬೆಂಕಿ
ರಸ್ತೆ ಬದಿ ನಿಲ್ಲಿಸಿದ್ದ ಟಾಟಾ ಏಸ್ ವಾಹನದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಸಂಪಿಗೆಹಳ್ಳಿ ಠಾಣೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.
ಥಣಿಸಂದ್ರ ಸಮೀಪದ ಅಮರ ಜ್ಯೋತಿ ನಗರದ ಸರಕಾರಿ ಶಾಲೆ ಹಿಂಭಾಗದ ರಸ್ತೆಯಲ್ಲಿ ಇಮ್ರಾನ್ ಎಂಬುವವರು ಗುರುವಾರ ರಾತ್ರಿ ತಮ್ಮ ಟಾಟಾ ಏಸ್ ವಾಹನ ನಿಲ್ಲಿಸಿ ಹೋಗಿದ್ದರು. ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ವಾಹನದ ಬ್ಯಾಟರಿಯಲ್ಲಿ ಉಂಟಾದ ಕಿಡಿಯಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಇಡೀ ವಾಹನ ಸುಟ್ಟು ಕರಕಲಾಗಿದೆ ಎನ್ನಲಾಗಿದೆ. ಘಟನೆ ಸಂಬಂಧ ಇಮ್ರಾನ್ ದೂರು ನೀಡಿದ್ದಾರೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ ಎಂದು ಪೊಲೀಸರು ಹೇಳಿದರು. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read more
[wpas_products keywords=”deal of the day sale today offer all”]