Karnataka news paper

ಯುಪಿ ಚುನಾವಣೆ: ಕಾಂಗ್ರೆಸ್ ಬಂಡಾಯ ನಾಯಕಿ ಅದಿತಿ ಸಿಂಗ್ ರಾಯ್ ಗೆ ಬಿಜೆಪಿ ಟಿಕೆಟ್; ರಾಯ್ ಬರೇಲಿಯಿಂದ ಕಣಕ್ಕೆ


Online Desk

ನವದೆಹಲಿ:  ಕಾಂಗ್ರೆಸ್ ಬಂಡಾಯ ನಾಯಕಿ ಅದಿತಿ ಸಿಂಗ್ ಅವರನ್ನು ರಾಯ್ ಬರೇಲಿಯಿಂದ ಬಿಜೆಪಿ ಕಣಕ್ಕಿಳಿಸಿದೆ. ಇತ್ತೀಚಿಗಷ್ಟೇ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿರುವ ಅಸೀಮ್ ಅರುಣ್ ಕನ್ನೌಜ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಘೋಷಿಸಿದೆ.

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ 85 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಹೊಸದಾಗಿ ಬಿಡುಗಡೆಗೊಳಿಸಿದೆ. ಅದಿತಿ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿನಿಧಿಸುವ ರಾಯಲ್ ಬರೇಲಿ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿದ್ದಾರೆ. ಅವರು ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. 

ಸಮಾಜವಾದಿ ಪಕ್ಷದ ಪರಮೋಚ್ಚ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಸಂಬಂಧಿ, ಹಾಲಿ ಶಾಸಕ ಹರಿ ಓಂ ಯಾದವ್ ಅವರಿಗೂ ಬಿಜೆಪಿ ಟಿಕೆಟ್ ಅಂತಿಮಗೊಳಿಸಿದೆ. 



Read more

[wpas_products keywords=”deal of the day”]