Karnataka news paper

Karnataka Covid-19 Update: 50 ಸಾವಿರ ದಾಟಿದ ಪ್ರಕರಣ, 19 ಮಂದಿ ಸಾವು


ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಭಾನುವಾರ ಸೋಂಕು ದೃಢಪಟ್ಟವರ ಸಂಖ್ಯೆ 50 ಸಾವಿರದ ಗಡಿ (50,210) ದಾಟಿದೆ. ಕೋವಿಡ್ ಕಾಣಿಸಿಕೊಂಡಾಗಿನಿಂದ ಈವರೆಗೆ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 3.57 ಲಕ್ಷಕ್ಕೆ ಏರಿಕೆಯಾಗಿದೆ. ಕೋವಿಡ್ ಎರಡನೇ ಅಲೆಯಲ್ಲಿ 2021ರ ಮೇ 5 ರಂದು ರಾಜ್ಯದಲ್ಲಿ ಹೊಸ ಪ್ರಕರಣಗಳು 50 ಸಾವಿರದ ಗಡಿ (50,112) ದಾಟಿತ್ತು. ಬಳಿಕ ಪ್ರಕರಣಗಳ ಸಂಖ್ಯೆ ಇಳಿಮುಖ ಮಾಡಿತ್ತು. ಈಗ ಮತ್ತೆ ಏರುಗತಿ ಪಡೆದುಕೊಂಡಿದೆ. 

ಒಂದು ದಿನದ ಅವಧಿಯಲ್ಲಿ 2.20 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 22.77 ರಷ್ಟಿದೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 35.17 ಲಕ್ಷಕ್ಕೆ ಏರಿಕೆಯಾಗಿದೆ. 

ಐದು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ನಾಲ್ಕು ಅಂಕಿ, 24 ಜಿಲ್ಲೆಗಳಲ್ಲಿ ಮೂರು ಅಂಕಿಯಲ್ಲಿದೆ. ಬೆಂಗಳೂರಿನಲ್ಲಿ ಹೊಸದಾಗಿ 26,299 ಪ್ರಕರಣಗಳು ದೃಢಪಟ್ಟಿವೆ. ಮೈಸೂರಿನಲ್ಲಿ 4,359, ತುಮಕೂರಿನಲ್ಲಿ 1,963, ಹಾಸನದಲ್ಲಿ 1,922, ಮಂಡ್ಯದಲ್ಲಿ 1,455 ಹಾಗೂ ಕೊಡಗಿನಲ್ಲಿ 1,139 ಮಂದಿ ಹೊಸದಾಗಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಸಾವಿರಕ್ಕಿಂತ ಕಡಿಮೆ ಇವೆ.

ಸೋಂಕಿತರಲ್ಲಿ 22,842 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 31.21 ಲಕ್ಷಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿಯೇ 2.31 ಲಕ್ಷ ಮಂದಿ ಸೋಂಕಿತರಿದ್ದಾರೆ. 

ಕೊರೊನಾ ಸೋಂಕಿತರಲ್ಲಿ 19 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಎಂಟು ಮಂದಿ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ ತಲಾ ಇಬ್ಬರು, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಗದಗ, ಮೈಸೂರು ಹಾಗೂ ರಾಯಚೂರಿನಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಮರಣ ಪ್ರಮಾಣ ದರವು ಶೇ 0.03 ರಷ್ಟು ವರದಿಯಾಗಿದೆ. ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,582ಕ್ಕೆ ಏರಿಕೆಯಾಗಿದೆ. 

163 ಓಮೈಕ್ರಾನ್ ಪ್ರಕರಣ ಪತ್ತೆ

ರಾಜ್ಯದಲ್ಲಿ ಕೊರೊನಾ ವೈರಾಣುವಿನ ರೂಪಾಂತರಿ ಓಮೈಕ್ರಾನ್ 163 ಮಂದಿಯಲ್ಲಿ ಹೊಸದಾಗಿ ದೃಢಪಟ್ಟಿದೆ. ಈ ಮಾದರಿಯ ಪ್ರಕರಣಗಳ ಒಟ್ಟು ಸಂಖ್ಯೆ 931ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 2,956 ಡೆಲ್ಟಾ ಪ್ರಕರಣಗಳು ಹಾಗೂ ಡೆಲ್ಟಾ ಉಪತಳಿಯ 1,372 ಪ್ರಕರಣಗಳು ವರದಿಯಾಗಿವೆ.



Read more from source

[wpas_products keywords=”deal of the day sale today kitchen”]