Karnataka news paper

ಮಹಿಳಾ ವಿವಿ ಮುಚ್ಚಲು ಸಂಚು ಆರೋಪ; ವದಂತಿಗೆ ಕಿವಿಕೊಡಬೇಡಿ ಎಂದ್ರು ಕಾರಜೋಳ


ಬೆಂಗಳೂರು: ವಿಜಯಪುರದಲ್ಲಿರುವ ರಾಜ್ಯದ ಏಕೈಕ ಮಹಿಳಾ ವಿಶ್ವ ವಿದ್ಯಾಲಯ ಮುಚ್ಚಲು ಸಂಚು ನಡೆಸಲಾಗಿದೆ ಎಂಬ ಮಾಜಿ ಸಚಿವ ಎಂ ಬಿ ಪಾಟೀಲ್ ಆರೋಪವನ್ನು ಸಚಿವ ಗೋವಿಂದ ಕಾರಜೋಳ ನಿರಾಕರಿಸಿದ್ದಾರೆ.

ಬೆಂಗಳೂರಿನ ಆರ್‌ಟಿ‌ ನಗರದ ಸಿಎಂ‌ ನಿವಾಸದ ಬಳಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ವದಂತಿಗೆ ಕಿವಿಕೊಡಬೇಡಿ. ಮಹಿಳಾ ವಿಶ್ವವಿದ್ಯಾಲಯ ಮುಚ್ಚಲಾಗುತ್ತದೆ ಎಂಬ ವದಂತಿ ಹಬ್ಬಿಸುತ್ತಿದ್ದಾರೆ‌. ಸರ್ಕಾರದ ಮುಂದೆ ವಿಶ್ವ ವಿದ್ಯಾಲಯ ಮುಚ್ಚುವಂತಹ ಯಾವುದೇ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದರು. ಅದನ್ನು ಕ್ಲೋಸ್ ಮಾಡುವ ಪ್ರಶ್ನೆಯೂ ಇಲ್ಲ. ಮಹಿಳಾ ವಿಶ್ವವಿದ್ಯಾಲಯ ಅಭಿವೃದ್ಧಿ ಕಡೆ ಸರ್ಕಾರದ ಗಮನ ಕೊಡುತ್ತದೆ. ಸುಳ್ಳು ವದಂತಿಗಳಿಗೆ ಯಾರು ಕಿವಿಗೊಡಬೇಡಿ ಎಂದು ತಿಳಿಸಿದರು.
ಹೊಳೆನರಸೀಪುರದಲ್ಲಿ ಸ್ನಾತಕೋತ್ತರ ಕೋರ್ಸ್ ಬೇಡಿಕೆ ನಿರಾಕರಣೆ; ಕೃಷ್ಣಾ ಕಚೇರಿ ಆವರಣದಲ್ಲಿ ರೇವಣ್ಣ ಧರಣಿ!
ರಾಜ್ಯದ ಏಕೈಕ ಮಹಿಳಾ ವಿವಿಯನ್ನು ಮುಚ್ಚಲು ಸರ್ಕಾರ ಮುಂದಾಗಿದೆ ಎಂದು ಎಂ ಬಿ ಪಾಟೀಲ್ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ವಿಜಯಪುರದ ಅಕ್ಕಮಹಾದೇವಿ ವಿಶ್ವ ವಿದ್ಯಾಲಯವನ್ನು ರದ್ದುಗೊಳಿಸುವ ನಿರ್ಧಾರ ಕೈ ಬಿಡಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಪದಾಧಿಕಾರಿಗಳು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್, ವಿವಿಯ ವಿಶ್ರಾಂತ ಉಪಕುಲಪತಿ ಡಾ. ಸಬೀಹಾ, ವಸುಂಧರಾ ಭೂಪತಿ, ಅಕೈ ಪದ್ಮಶಾಲಿ ಮತ್ತಿತರರು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಆದರೆ ಇದೀಗ ಈ ಆರೋಪವನ್ನು‌ ಕಾರಜೋಳ ನಿರಾಕರಣೆ ಮಾಡಿದ್ದಾರೆ.

ರಾಜ್ಯದ ಏಕೈಕ ಮಹಿಳಾ ವಿವಿಯಾಗಿರುವ ಅಕ್ಕಮಹಾದೇವಿ ವಿವಿ ಆರಂಭಗೊಂಡು ಎರಡು ದಶಕವಾದರೂ ನಿಶ್ಚಿತ ಗುರಿ ಸಾಧಿಸುವಲ್ಲಿ ವಿಫಲವಾಗಿದೆ. ಈ ವಿಶ್ವವಿದ್ಯಾಲಯ ಹೆಸರಿಗಷ್ಟೇ ಮಹಿಳಾ ವಿಶ್ವವಿದ್ಯಾಲಯವಾಗಿದೆ ಎಂಬ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಮಹಿಳಾ ವಿಶ್ವವಿದ್ಯಾಲಯವನ್ನು ರದ್ದುಗೊಳಿಸಿ, ಬಾಗಲಕೋಟೆ, ವಿಜಯಪುರ ಅವಳಿ ಜಿಲ್ಲೆಗೆ ಸೀಮಿತವಾಗಿ ಸಾಮಾನ್ಯ ವಿಶ್ವವಿದ್ಯಾಲಯವಾಗಿ ಅಥವಾ ಕ್ಲಸ್ಟರ್‌ ವಿವಿಯಾಗಿ ಪರಿವರ್ತನೆ ಮಾಡಲು ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿತ್ತು.



Read more

[wpas_products keywords=”deal of the day sale today offer all”]