ಹೈಲೈಟ್ಸ್:
- ಸಂಸ್ಕೃತ ವಿಶ್ವವಿದ್ಯಾಲಯ ಇಂದು ಬೇಕಿದೆ. ಅದಕ್ಕೆ ಬೇಕಾದ ಕೆಲಸಗಳು ನಡೆದಿವೆ
- ನಮ್ಮ ರಾಜ್ಯದಲ್ಲಿ ಕನ್ನಡವೇ ಪ್ರಮುಖವಾದುದು. ಕನ್ನಡ ವಿವಿಗೆ ಹೆಚ್ಚಿನ ಆದ್ಯತೆ ಕೊಟ್ಟಿದ್ದೇವೆ
- ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಹೇಳಿಕೆ
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಕನ್ನಡವೇ ಪ್ರಮುಖವಾದುದು. ಕನ್ನಡ ವಿವಿಗೆ ಹೆಚ್ಚಿನ ಆದ್ಯತೆ ಕೊಟ್ಟಿದ್ದೇವೆ. ಸಂಸ್ಕೃತ ಭಾಷೆ ಬೆಳೆಯಲೆಂದು ವಿಶ್ವವಿದ್ಯಾಲಯ ತರುತ್ತಿದ್ದೇವೆ. ಆದರೆ ಕನ್ನಡವನ್ನು ಎಲ್ಲೂ ಕಡೆಗಣಿಸುತ್ತಿಲ್ಲ ಎಂದರು.
ಇನ್ನು ಅತಿಥಿ ಉಪನ್ಯಾಸಕರ ನೇಮಕ ವಿಚಾರವಾಗಿ ಮಾತನಾಡಿದ ಅವರು, 4,500 ಜನ ಅರ್ಹತೆ ಇರುವವರು ಸಿಕ್ಕಿದ್ದಾರೆ. ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಇನ್ನು ಸಂಪುಟದಿಂದ ನಿಷ್ಕ್ರಿಯರನ್ನು ಕೈಬಿಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅದು ಮುಖ್ಯಮಂತ್ರಿ ಅವರಿಗೆ ಸೇರಿದ್ದು. ಅವರು ಯಾವ ನಿರ್ಧಾರವನ್ನು ಬೇಕಾದ್ರೂ ತೆಗೆದುಕೊಳ್ಳಬಹುದು. ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಹೇಳಿದರು.
ವಿ.ವಿ.ಗಳಲ್ಲಿ ಸುಗಮ ಪರೀಕ್ಷಾ ವ್ಯವಸ್ಥೆಗೆ ತಂತ್ರಾಂಶ ಅಳವಡಿಕೆ
ಉನ್ನತ ಶಿಕ್ಷಣ ವಲಯದಲ್ಲಿ ಪರೀಕ್ಷಾಂಗವನ್ನು ಸದೃಢಗೊಳಿಸುವ ಪರೀಕ್ಷಾ ತಂತ್ರಾಂಶ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಮಾಣಪತ್ರ ಇತ್ಯಾದಿಗಳನ್ನು ಸುಗಮವಾಗಿ ಒದಗಿಸುವ `ಇ-ಸಹಮತಿ’ ಉಪಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಚಾಲನೆ ನೀಡಿದರು.
ವಿಧಾನಸೌಧದಲ್ಲಿ ಇದರ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಇದರಿಂದ ವಿ.ವಿ.ಗಳು ಪರೀಕ್ಷೆ ಮತ್ತು ಅಂಕಪಟ್ಟಿಗಳ ಬಾಬ್ತಿಗೆಂದು ಖರ್ಚು ಮಾಡುತ್ತಿದ್ದ ಸುಮಾರು 60 ಕೋಟಿ ರೂ. ಹಣ ಉಳಿತಾಯವಾಗಲಿದೆ. ಜೊತೆಗೆ, ನಕಲಿ ಅಂಕಪಟ್ಟಿ ಮತ್ತು ಪ್ರಮಾಣಪತ್ರಗಳ ದಂಧೆಗೆ ಇದರಿಂದ ಕಡಿವಾಣ ಬೀಳಲಿದ್ದು, ಮಾನ್ಯತೆ ಹೊಂದಿರುವ 3,400ಕ್ಕೂ ಹೆಚ್ಚು ಕಾಲೇಜುಗಳ 16 ಲಕ್ಷ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ ಎಂದರು.
ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ ತಂತ್ರಾಂಶ ಯೋಜನೆಯಡಿ ಇವುಗಳನ್ನು ಅಭಿವೃದ್ಧಿಪಡಿಸಲಾಗಿದೆ. 10 ಮಾಡ್ಯೂಲ್ ಗಳನ್ನು ಒಳಗೊಂಡಿರುವ ಈ ಯೋಜನೆಯಡಿ 2021ರ ಆಗಸ್ಟ್ ಮತ್ತು ಡಿಸೆಂಬರ್ ತಿಂಗಳಲ್ಲಿ ಕ್ರಮವಾಗಿ ಪ್ರವೇಶಾತಿ ಮತ್ತು ಶೈಕ್ಷಣಿಕ ಹಾಗೂ ತರಗತಿ ನಿರ್ವಹಣೆ ತಂತ್ರಾಂಶಗಳನ್ನು ಅಳವಡಿಸಲಾಗಿದೆ. ಉಳಿದವುಗಳನ್ನು ಜೂನ್ ಹೊತ್ತಿಗೆ ಅಳವಡಿಸಲಾಗುವುದು. ಇಂತಹ ವ್ಯವಸ್ಥೆ ಬೇರೆ ಯಾವ ರಾಜ್ಯದಲ್ಲೂ ಇಲ್ಲ ಎಂದು ಅವರು ಹೇಳಿದರು.
Read more
[wpas_products keywords=”deal of the day sale today offer all”]