Karnataka news paper

ಗತಕಾಲದ ಅನುಭವ ಮಂಟಪ ಮರುಸೃಷ್ಠಿಗೆ ಸೂಚನೆ: ಸಿಎಂ ಬೊಮ್ಮಾಯಿ


Online Desk

ಬೆಂಗಳೂರು: ಬಸವಕಲ್ಯಾಣದಲ್ಲಿ ನಿರ್ಮಾಣವಾಗಲಿರುವ ಅನುಭವ ಮಂಟಪದಲ್ಲಿ ಬಸವಣ್ಣನ ಕಾಲದ ಅನುಭವ ಮಂಟಪವನ್ನೇ ಮರುಸೃಷ್ಟಿ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಬಸವಕಲ್ಯಾಣದಲ್ಲಿ ನಿರ್ಮಿಸಲಾಗುತ್ತಿರುವ ಅನುಭವ ಮಂಟಪದ ಪ್ರಗತಿ ಕುರಿತು ಸಭೆ ನಡೆಸಿ ಅನುಭವ ಮಂಟಪದ ಪ್ರಾತ್ಯಕ್ಷಿಕೆಯನ್ನು ವೀಕ್ಷಣೆ ಮಾಡಿದರು. ಬಸವಣ್ಣನವರ ಕಾಲದಲ್ಲಿ ಅನುಭವ ಮಂಟಪವು ಸದಾ ಚಟುವಟಿಕೆಯಿಂದ ಕೂಡಿದ್ದು, ವಿಚಾರ ಮಂಥನ  ನಡೆಯುತ್ತಿತ್ತು. ಪ್ರಸ್ತುತ ನಿರ್ಮಿಸುತ್ತಿರುವ ಅನುಭವ ಮಂಟಪದಲ್ಲಿಯೂ ನಿರಂತರ ಚಟುವಟಿಕೆಗಳನ್ನು ನಡೆಸಲು ಪೂರಕವಾಗಿ ಸುಸಜ್ಜಿತ ಸಭಾಂಗಣಗಳು ಮತ್ತು ಇತರ ಮೂಲಸೌಕರ್ಯಗಳನ್ನು ಸೃಷ್ಟಿಸುವಂತೆ ಸೂಚನೆ ನೀಡಿದರು.

ಇದಲ್ಲದೆ ಮಕ್ಕಳಿಗೆ ಹಿಂದಿನ ಅನುಭವ ಮಂಟಪ ಹೇಗಿತ್ತು ಎಂಬ ಅರಿವು ಮೂಡಿಸುವ ರೀತಿಯಲ್ಲಿ ಇದನ್ನು ನಿರ್ಮಿಸಬೇಕು. ಜೊತೆಗೆ ಸುಸಜ್ಜಿತವಾದ ಡಿಜಿಟಲ್ ಲೈಬ್ರರಿ, ಹಾಲೋಗ್ರಾಫಿಕ್ ಪ್ರದರ್ಶನ ಮೊದಲಾದ ವ್ಯವಸ್ಥೆಗಳನ್ನು ರೂಪಿಸುವ ಮೂಲಕ ಅನುಭವ ಮಂಟಪದ ಅನುಭವ ಜನರಿಗೆ ಆಗುವಂತೆ  ಮಾಡಬೇಕು. ಕನಿಷ್ಠ ೨೦೦ ಜನ  ಕುಳಿತುಕೊಳ್ಳುವ ಎರಡು ಸಭಾಂಗಣ ನಿರ್ಮಾಣ ಮಾಡಿ ಎಂದು ಸೂಚಿಸಿದರು.

ದಿನದ 24 ಗಂಟೆ ಕಾಲ ವಿದ್ಯುತ್ ಪೂರೈಕೆ ಇರುವಂತೆ ನೋಡಿಕೊಳ್ಳಿ. ಕಟ್ಟಡದ ಗುಣಮಟ್ಟ ಉತ್ಕೃಷ್ಟವಾಗಿ ಇರಲಿ. ಅನುಭವ ಮಂಟಪದ ಸುರಕ್ಷತೆ ಮತ್ತು ನಿರ್ವಹಣೆ ಬಗ್ಗೆ ಆದ್ಯತೆ ನೀಡುವಂತೆ ಹಾಗೂ ಯೋಜನೆಯ ಭಾಗವಾಗಿ ಪರಿಗಣಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.
 





Read more

[wpas_products keywords=”deal of the day”]