Karnataka news paper

ಯುಜಿ ಕೋರ್ಸ್‌ಗಳಿಗೆ ಕನ್ನಡ ಭಾಷೆ ಕಡ್ಡಾಯ ನಿಯಮ ರದ್ದುಗೊಳಿಸಿದ ರಾಜ್ಯ ಸರ್ಕಾರ!


IANS

ಬೆಂಗಳೂರು: ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಹಿಂಪಡೆದಿದೆ.

ಹೊಸ ಆದೇಶದ ಪ್ರಕಾರ, ಸ್ಥಳೀಯ ಭಾಷೆಯನ್ನು ತೆಗೆದುಕೊಳ್ಳಲು ಬಯಸದ ವಿದ್ಯಾರ್ಥಿಗಳನ್ನು ಹೈಕೋರ್ಟ್‌ನಿಂದ ಮುಂದಿನ ಆದೇಶದವರೆಗೆ ಒತ್ತಾಯಿಸಲಾಗುವುದಿಲ್ಲ. ಈ ಸಂಬಂಧ ಹೈಕೋರ್ಟ್ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಆದೇಶವನ್ನು ಅನುಸರಿಸಿ, ಈಗಾಗಲೇ ಕೋರ್ಸ್‌ಗೆ ಸೇರಿರುವ ವಿದ್ಯಾರ್ಥಿಗಳಿಗೆ ಕನ್ನಡದ ಬದಲಿಗೆ ತಮ್ಮ ಐಚ್ಛಿಕ ಭಾಷೆಯನ್ನು ಆಯ್ಕೆ ಮಾಡಲು ಅವಕಾಶವಿದೆ. ಹಾಜರಾತಿಯನ್ನು ಹೊಸ ಭಾಷೆಗೆ ಸರಿ ಹೊಂದಿಸಲಾಗುತ್ತದೆ.

ಜನವರಿ 21ರ ಸುತ್ತೋಲೆಯನ್ನು ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಮತ್ತು ರಿಜಿಸ್ಟ್ರಾರ್‌ಗಳಿಗೆ ಕಳುಹಿಸಲಾಗಿದೆ. ಈ ನಿಟ್ಟಿನಲ್ಲಿ ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರಿಗೂ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಕನ್ನಡಕ್ಕೊಂದು ಹೊಸ ಯೂನಿಕೋಡ್ ಫಾಂಟ್: ಆನೆಯನ್ನು ಹೋಲುವ ಫಾಂಟ್ ಬಂಡೀಪುರ

2021ರ ಆಗಸ್ಟ್ 7ರಂದು, ರಾಜ್ಯ ಸರ್ಕಾರವು ರಾಜ್ಯದಲ್ಲಿ ಪದವಿಪೂರ್ವ ಕೋರ್ಸ್‌ಗಳನ್ನು ತೆಗೆದುಕೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸಿತ್ತು. ಈ ಆದೇಶವು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನಕ್ಕೆ ಅನುಗುಣವಾಗಿದೆ ಎಂದು ಸರ್ಕಾರ ಹೇಳಿತ್ತು. ಶಾಲೆಯಲ್ಲಿ ಕನ್ನಡ ಕಲಿಯದ ವಿದ್ಯಾರ್ಥಿಗಳಿಗೆ ಒಂದು ಸೆಮಿಸ್ಟರ್‌ಗೆ ಕ್ರಿಯಾತ್ಮಕ ಕನ್ನಡವನ್ನು ಅಧ್ಯಯನ ಮಾಡುವಂತೆ ಸರ್ಕಾರ ಹೇಳಿತ್ತು.

ಸಂಸ್ಕೃತ ಭಾರತಿ(ಕರ್ನಾಟಕ) ಟ್ರಸ್ಟ್, ಇತರ ಮೂರು ಸಂಸ್ಥೆಗಳು ಮತ್ತು ಐದು ವಿದ್ಯಾರ್ಥಿಗಳು ಸರ್ಕಾರದ ಆದೇಶವನ್ನು ಪ್ರಶ್ನಿಸಿ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಹಂತದಲ್ಲಿ ಭಾಷೆಯನ್ನು ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಒತ್ತಾಯಿಸುವುದಿಲ್ಲ ಎಂದು ಹೈಕೋರ್ಟ್ ಈ ಹಿಂದೆ ಹೇಳಿತ್ತು. ಮುಂದಿನ ಆದೇಶದವರೆಗೆ ಕನ್ನಡ ಭಾಷೆಯನ್ನು ಕಲಿಯಲು ಇಷ್ಟಪಡದ ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಕಲಿಯುವಂತೆ ಒತ್ತಾಯಿಸುವುದಿಲ್ಲ ಎಂದು ನ್ಯಾಯಾಲಯಕ್ಕೆ ಹೇಳಿದೆ.



Read more

[wpas_products keywords=”deal of the day”]