Online Desk
ಬೆಂಗಳೂರು: ಹಲವು ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ, ತಮ್ಮ ಸಂಪರ್ಕದಲ್ಲಿರುವ ಒಬ್ಬನೇ ಒಬ್ಬ ಬಿಜೆಪಿ ಶಾಸಕನ ಹೆಸರು ಬಹಿರಂಗ ಪಡಿಸುವಂತೆ ಬಿಜೆಪಿ ಸವಾಲು ಹಾಕಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ , ಸಿದ್ದರಾಮಯ್ಯನವರೇ, ನಿಮ್ಮ ಜೊತೆ ಯಾರಾದರೂ ಬಂದರೆ ಅದು ತತ್ವ ಸಿದ್ದಾಂತದ ನಂಬಿಕೆಯಿಂದಲ್ಲ. ಅದು ಅವಕಾಶವಾದ ಹಾಗೂ ಅಧಿಕಾರ ದಾಹಕ್ಕಾಗಿ ಮಾತ್ರ, ಕಾಂಗ್ರೆಸ್ ಕಳ್ಳಾಟ ಎಂದು ಲೇವಡಿ ಮಾಡಿದೆ.
ಇದನ್ನೂ ಓದಿ: ಸಿಎಂ ಹುದ್ದೆ ಮೇಲೆ ಕಣ್ಣು: ಸೇಫ್ ಕ್ಷೇತ್ರಗಳಿಗಾಗಿ ‘ತಲಾಶ್; ದೇವರಾಜ್ ಅರಸ್ ಕ್ಷೇತ್ರ ಹುಣಸೂರಿನಿಂದ ಸಿದ್ದರಾಮಯ್ಯ ಸ್ಪರ್ಧೆ!
ಸಿದ್ದರಾಮಯ್ಯ ಹಾಗೂ ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ. ಬಿಜೆಪಿಯವರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಭ್ರಮೆ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಈ ಇಬ್ಬರು ನಾಯಕರಿಗೆ ಧೈರ್ಯವಿದ್ದರೆ, ಅವರ ಸಂಪರ್ಕಕ್ಕೆ ಬಂದ ಒಬ್ಬ ಬಿಜೆಪಿ ಶಾಸಕನ ಹೆಸರನ್ನು ಬಹಿರಂಗಪಡಿಸಲಿ ಎಂದು ಸವಾಲೆಸೆದಿದೆ.
ಸಿದ್ದರಾಮಯ್ಯನವರೇ,
ನಿಮ್ಮ ಜೊತೆ ಯಾರಾದರೂ ಬಂದರೆ ಅದು ತತ್ವ ಸಿದ್ದಾಂತದ ನಂಬಿಕೆಯಿಂದಲ್ಲ. ಅದು ಅವಕಾಶವಾದ ಹಾಗೂ ಅಧಿಕಾರ ದಾಹಕ್ಕಾಗಿ ಮಾತ್ರ.#ಕಾಂಗ್ರೆಸ್ಕಳ್ಳಾಟ
— BJP Karnataka (@BJP4Karnataka) January 25, 2022
Read more
[wpas_products keywords=”deal of the day”]