ಗೃಹ ಭಾಗ್ಯ ಯೋಜನೆಗಳಿಗೆ ಮತ್ತೆ ಚಾಲನೆ; ಕೋಲಾರ ಜಿಲ್ಲೆಗೆ 6,170 ಮನೆಗಳ ಬಿಡುಗಡೆ!
ಕಾಮಗಾರಿಗಳಲ್ಲಿ ಗುಣಮಟ್ಟ ಹಾಗೂ ಪಾರದರ್ಶಕತೆ ಕಾಪಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಪ್ರತಿಯೊಂದು ಇಲಾಖೆಯನ್ನು ಕೂಲಂಕಷವವಾಗಿ ಪರಿಶೀಲನೆ ಮಾಡಿ ಜಿಲ್ಲೆಗೆ ಬೇಕಾಗಿರುವ ಅನುದಾನವನ್ನು ಮುಂದಿನ ಬಾರಿಯ ಬಜೆಟ್ನಲ್ಲಿ ಕೊಡಿಸಲಾಗುವುದು ಎಂದು ತಿಳಿಸಿದರು.
ನೂತನ ಜಿಲ್ಲಾಧಿಕಾರಿ ವೆಂಕಟರಾಜು ಮಾತನಾಡಿ, ನಾವು ಆರ್ಥಿಕ ವರ್ಷದ ಕೊನೆಯಲ್ಲಿದ್ದು, ಜಿಲ್ಲೆಗೆ ಬಂದಿರುವ ಅನುದಾನ ವಾಪಸ್ ಹೋಗದಂತೆ ಸದ್ಬಳಕೆ ಮಾಡಿಕೊಳ್ಳಬೇಕಿದೆ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಸಭೆಯಲ್ಲಿಸಂಸದ ಎಸ್.ಮುನಿಸ್ವಾಮಿ, ಜಿಪಂ ಸಿಇಒ ಯುಕೇಶ್ಕುಮಾರ್, ಎಸ್ಪಿ ಡಿ.ದೇವರಾಜ್, ಎಡಿಸಿ ಡಾ.ಸ್ನೇಹಾ, ಎಎಸ್ಪಿ ಸಚಿನ್ ಘೋರ್ಷಡೆ, ಉಪವಿಭಾಗಾಧಿಕಾರಿ ಆನಂದ್ ಪ್ರಕಾಶ್ ಮೀನಾ ಸೇರಿದಂತೆ ಪ್ರಮುಖರಿದ್ದರು.
ಜನ ಮೆಚ್ಚುವ ಕೆಲಸ ಮಾಡುತ್ತೇನೆ
ಕೋಲಾರ: ಜಿಲ್ಲೆಯ ಸಂಪೂರ್ಣ ಜವಾಬ್ದಾರಿಯನ್ನು ಮುಖ್ಯಮಂತ್ರಿ ನೀಡಿದ್ದು, ಜಿಲ್ಲೆಯ ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಹೆಚ್ಚಿನ ಗಮನಹರಿಸ ಲಾಗುವುದು. ಇದರೊಂದಿಗೆ ಜನರು ಮೆಚ್ಚುವಂತಹ ಕೆಲಸಗಳನ್ನು ಮಾಡ ಲಾಗುವುದು ಎಂದು ಜಿಲ್ಲಾಉಸ್ತುವಾರಿ ಸಚಿವ ಮುನಿರತ್ನ ಹೇಳಿದರು.
ಗಗನಕ್ಕೇರಿದ್ದ ತರಕಾರಿಗಳ ಬೆಲೆ ಭಾರೀ ಇಳಿಕೆ; ಗ್ರಾಹಕರಿಗೆ ಸಂತಸವಾದ್ರೆ ಬೆಳೆಗಾರರಿಗೆ ನಿರಾಸೆ
ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿರತ್ನ, ಹಿಂದೆ ಕೊರೊನಾ ನಿರ್ವಹಣೆಗೆ ಉಸ್ತುವಾರಿಯಾಗಿದ್ದರಿಂದ ಅಧಿಕಾರಿಗಳೊಂದಿಗೆ ಚರ್ಚಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಮುಂದಿನ ತಿಂಗಳು 12-13ರಂದು ಜಿಲ್ಲೆಯ ಎಲ್ಲಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ತಿಳಿಸಿದರು.
ಅಧಿಕಾರಿಗಳ ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿನ ಸಮಸ್ಯೆಗಳನ್ನು ಅಗತ್ಯತೆಗಳನ್ನು ಪಟ್ಟಿ ಮಾಡಿಕೊಂಡು ಕಾರ್ಯ ನಿರ್ವಹಿಸಲಾಗುವುದು. ಮುಖ್ಯಮಂತ್ರಿಗಳು ನೀಡಿರುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಲಾಗುವುದು ಎಂದು ಹೇಳಿದರು.
Read more
[wpas_products keywords=”deal of the day sale today offer all”]