Karnataka news paper

ಪ್ರಧಾನಿ ಮೋದಿ ತೆಗಳುವ ಹುಚ್ಚುತನದಿಂದ ಭಾರತದ ವ್ಯಕ್ತಿತ್ವಕ್ಕೆ ಧಕ್ಕೆ: ಹಮೀದ್ ಅನ್ಸಾರಿ ವಿರುದ್ಧ ಬಿಜೆಪಿ ವಾಗ್ದಾಳಿ


PTI

ನವದೆಹಲಿ: ಭಾರತ ಹಿಂದೂ ರಾಷ್ಟ್ರವಾಗುತ್ತಿದ್ದು, ಜನರಿಗೆ ಅಭದ್ರತೆ ಕಾಡುತ್ತಿದೆ ಎಂದು ಭಾರತದ ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಹೇಳಿಕೆಗೆ ಬಿಜೆಪಿ ವಿರೋಧ ವ್ಯಕ್ತ ಪಡಿಸಿದೆ.

ಅಮೆರಿಕಾದಲ್ಲಿರುವ ಭಾರತ ಮೂಲದ ಮುಸ್ಲಿಂ ಸಂಘಟನೆಯೊಂದು ಆಯೋಜಿಸಿದ ವರ್ಚುಚಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಮೀದ್ ಅನ್ಸಾರಿ ಭಾರತದಲ್ಲಿ ಮಾನವ ಹಕ್ಕುಗಳನ್ನು ಹತ್ತಿಕ್ಕಲಾಗುತ್ತಿದೆ ಎಂದು ಹೇಳಿದ್ದರು.

ನಾನು ಪ್ರಸ್ತುತ ದಿನಗಳಲ್ಲಿ ಗಮನಿಸಿದಾಗ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಸುವ ಉದ್ದೇಶ ಸ್ಪಷ್ಟವಾಗಿ ಗೊತ್ತಾಗುತ್ತಿದೆ. ರಾಷ್ಟ್ರದಲ್ಲಿರುವ ಎಲ್ಲಾ ನಾಗರೀಕರನ್ನು ಒಂದೇ ಎಂದು ಕಾಣುವ ಅಭಿಪ್ರಾಯ ಬದಲಾಗಿದೆ. ನಾಗರಿಕರ ಕೆಲವು ಹಕ್ಕುಗಳನ್ನು ದಮನಿಸುವಂತಹ ಕಾರ್ಯ ದೇಶದಲ್ಲಿ ನಡೆಯುತ್ತಿದೆ. ಇದರಿಂದ ದೇಶದಲ್ಲಿರುವ ಜನರಲ್ಲಿ ಅಭದ್ರತೆ ಕಾಡುತ್ತಿದೆ ಎಂದು ಭಾರತದ ಬಗ್ಗೆ ಟೀಕಿಸಿದ್ದರು

ಇತ್ತಿಚೀನ ದಿನಗಳಲ್ಲಿ ಭಾರತದಲ್ಲಿ ಧರ್ಮಗಳ ಬಗ್ಗೆ ತುಂಬಾ ಚರ್ಚೆಗಳಾಗುತ್ತಿವೆ. ಭಾರತದಲ್ಲಿ ಅಲ್ಪಸಂಖ್ಯಾತರ ನಂಬಿಕೆಗಳಿಗೆ ಒತ್ತುಕೊಡುತಿಲ್ಲ. ಅಲ್ಲದೆ ಅಲ್ಪಸಂಖ್ಯಾತರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಭಾರತವನ್ನು ಹಿಂದೂ ರಾಷ್ಟವನ್ನಾಗಿಸುವ ಕೆಲಸವಾಗುತ್ತಿದೆ ಎಂದು ಹೇಳಿದ್ದರು.

ಹಮೀದ್ ಅನ್ಸಾರಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ, ದೇಶವು ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ “ಶ್ರೀನಗರದ ಲಾಲ್ ಚೌಕ್‌ನಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ  ಸಂದರ್ಭದಲ್ಲಿ, ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ್ದ ಒಬ್ಬರು, ಭಾರತದ ವಿರುದ್ಧ ಕೆಲಸ ಮಾಡಿದ್ದ ಮತ್ತು ಕಳಂಕಕ್ಕೆ ಸಂಚು ರೂಪಿಸಿದ  ಸಂಘಟನೆಯು ಏರ್ಪಡಿಸಿದ ವೇದಿಕೆಯಲ್ಲಿ
ಮಾತನಾಡಿ  ಭಾರತವನ್ನು ಟೀಕಿಸಿ ವರ್ಚಸ್ಸಿಗೆ ಧಕ್ಕೆ ತರುವಂತ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್ “ಐಎಸ್‌ಐ ಮತ್ತು ಇಡೀ ಪ್ರಪಂಚದ ಶಾಂತಿ ಮತ್ತು ಸಾಮರಸ್ಯವನ್ನು ಕದಡುವ ಪಿತೂರಿಯಲ್ಲಿ ತೊಡಗಿರುವ ಅಂತಹ ಎಲ್ಲಾ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದೆ” ಎಂದು ನಖ್ವಿ ದೂರಿದ್ದಾರೆ.

ಮೋದಿಯನ್ನು ಬಗ್ಗುಬಡಿಯುವ ಉದ್ದೇಶ ಪಿತೂರಿಯಾಗಿ ಬದಲಾಗುತ್ತಿದೆ, ಆದ್ದರಿಂದ ಇಂತಹ ಟೀಕೆಗಳನ್ನು ಮಾಡಲಾಗುತ್ತಿದೆ. ಅಲ್ಪಸಂಖ್ಯಾತರ ಮತಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಜನರು ಈಗ ದೇಶದಲ್ಲಿ ಪಾಸಿಟಿವ್ ವಾತಾವರಣದ ಬಗ್ಗೆ ಆತಂಕಗೊಂಡಿದ್ದಾರೆ ಎಂದು ನಖ್ವಿ ದೂರಿದ್ದಾರೆ.



Read more

[wpas_products keywords=”deal of the day”]