Karnataka news paper

ಬೆಂಗಳೂರಿನಲ್ಲಿ ಸೋಮವಾರದಿಂದ ಶಾಲೆಗಳ ಪುನಾರಂಭ: ಬಿ.ಸಿ.ನಾಗೇಶ್


ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರದಿಂದ ಶಾಲೆಗಳನ್ನು ಪುನಾರಂಭಿಸಲಾಗುತ್ತಿದೆ ಎಮದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಶಾಲೆಗಳನ್ನು ಆರಂಭಿಸಲು‌ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಶಾಲೆಗಳ ಭೌತಿಕ ತರಗತಿಗಳನನ್ನು ರದ್ದು ಮಾಡಿ ಆನ್‌ಲೈನ್ ತರಗತಿಗೆ ಅವಕಾಶ ನೀಡಲಾಗಿತ್ತು. ಸದ್ಯ, ಕೋವಿಡ್ ವ್ಯಾಪಕವಾಗಿ ಹರಡುತ್ತಿದ್ದರೂ ಮಕ್ಕಳ ಆರೋಗ್ಯದ ಪರಿಣಾಮ ಬೀರುತ್ತಿಲ್ಲವಾದ್ದರಿಂದ ಶಾಲೆಗಳನ್ನು ಆರಂಭಿಸಲಾಗಿದೆ. 



Read more from source

[wpas_products keywords=”deal of the day sale today kitchen”]