Karnataka news paper

ಉಮೇಶ್ ಕತ್ತಿ ನೇತೃತ್ವದ ತಂಡದ ಜೊತೆ ಸಿಎಂ ಬೊಮ್ಮಾಯಿ ಸಭೆ


Online Desk

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಸಚಿವ ಉಮೇಶ್ ಕತ್ತಿ ನೇತೃತ್ವದ ನಿಯೋಗದ ಜೊತೆ ಸಿಎಂ ಬೊಮ್ಮಾಯಿ ಸಭೆ ನಡೆಸಿದ್ದಾರೆ. 

ಬೆಂಗಳೂರಿನ ರೇಸ್​ಕೋರ್ಸ್​ ರಸ್ತೆಯ ಸರ್ಕಾರಿ ನಿವಾಸದಲ್ಲಿ ಸಭೆ ನಡೆಸಲಾಗಿದ್ದು, ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಬಜೆಟ್​ನಲ್ಲಿ ಅನುದಾನ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಈ ಸಭೆಯಲ್ಲಿ ಮಾಜಿ ಸಚಿವ ಲಕ್ಷ್ಮಣ ಸವದಿ, ಸಚಿವೆ ಶಶಿಕಲಾ ಜೊಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ನಾಯಕರಾದ ಮಹಾಂತೇಶ್ ಕವಟಗಿಮಠ, ಮಹದೇವಪ್ಪ ಯಾದವಾಡ, ಅಭಯ್ ಪಾಟೀಲ್, ಅನಿಲ್ ಬೆನಕೆ ಭಾಗವಹಿಸಿದ್ದಾರೆ ಎಂದು ತಿಳಿದುಬಂದಿದೆ. 

ಜಾರಕಿಹೊಳಿ ಸೋದರರು ಮತ್ತು ತಂಡ ಈ​ ಸಭೆಯಿಂದ ದೂರ ಉಳಿದಿದೆ. ಬೆಳಗಾವಿಯ ಬಿಜೆಪಿ ಶಾಸಕರ ನಡೆ ಭಾರಿ ಕುತೂಹಲ ಮೂಡಿಸಿದ್ದು, ಇತ್ತೀಚೆಗೆ ಜಾರಕಿಹೊಳಿ ಬ್ರದರ್ಸ್​ ದೂರವಿಟ್ಟು ಸಭೆ ನಡೆಸಿದ್ದ ಕತ್ತಿ, ಇಂದು ಜಾರಕಿಹೊಳಿ ಬ್ರದರ್ಸ್​ ದೂರವಿಟ್ಟು ಬೊಮ್ಮಾಯಿ ಭೇಟಿ ಮಾಡಿದ್ದಾರೆ.
 



Read more

[wpas_products keywords=”deal of the day”]