ಬಿಗ್ ಬಾಸ್ ಖ್ಯಾತಿಯ ವೈಷ್ಣವಿ ಗೌಡ ಹಾಗೂ ‘ಗೌಡ್ರು ಸೈಕಲ್’ ಸಿನಿಮಾದ ನಾಯಕ ಶಶಿಕಾಂತ್ ನಾಯಕ- ನಾಯಕಿಯಾಗಿ ನಟಿಸಿರುವ ಚಿತ್ರ ‘ಬಹುಕೃತ ವೇಷಂ’. ಈಗ ಕ್ಲೈಮಾಕ್ಸ್ ಚಿತ್ರೀಕರಣ ಮುಗಿಸಿದೆ.
ಪ್ರಶಾಂತ್ ಕೆ. ಎಳ್ಳಂಪಳ್ಳಿ ಈ ಚಿತ್ರದ ನಿರ್ದೇಶಕರು. ಇವರು ಈ ಹಿಂದೆ ‘ಗೌಡ್ರು ಸೈಕಲ್’ ಚಿತ್ರ ನಿರ್ದೇಶನ ಮಾಡಿದ್ದರು.
ಯಾರು ಊಹಿಸಲಾಗದ ರೀತಿಯಲ್ಲಿ ನಮ್ಮ ಚಿತ್ರದ ಕ್ಲೈಮ್ಯಾಕ್ಸ್ ಮೂಡಿಬಂದಿದೆ. ನಾಲ್ಕುವರೆ ನಿಮಿಷದ ಒಂದೇ ಸಂಭಾಷಣೆ ಕ್ಲೈಮ್ಯಾಕ್ಸ್ನಲ್ಲಿ ಇದೆ. ಶಶಿಕಾಂತ್ ಹಾಗೂ ವೈಷ್ಣವಿ ಗೌಡ ಪೈಪೋಟಿ ಮೇಲೆ ಅಭಿನಯಿಸಿದ್ದಾರೆ ಎಂದು ನಿರ್ದೇಶಕರು ತಿಳಿಸಿದರು.
ಎಚ್. ನಂದ ಹಾಗೂ ಡಿ.ಕೆ.ರವಿ ನಿರ್ಮಾಣದ ಈ ಚಿತ್ರಕ್ಕೆ ಅಧ್ಯಾಯ್ ತೇಜ್ ಕಥೆ ಚಿತ್ರಕಥೆ ಬರೆದಿದ್ದಾರೆ.
ವಿಜಯ ಪ್ರಕಾಶ್ ಅವರು ಹಾಡಿರುವ ‘ಮಾತುಕತೆ ನಿಂತ ಕಥೆ’ ಹಾಡಿಗೆ ಪ್ರೇಕ್ಷಕರ ಮೆಚ್ಚುಗೆ ಸಿಕ್ಕಿದೆ. ಲಹರಿ ಮ್ಯೂಸಿಕ್ ಮೂಲಕ ಟೀಸರ್ ಬಿಡುಗಡೆಯಾಗಿದೆ.
ವೈಶಾಖ್ ವಿ. ಭಾರ್ಗವ್ ಅವರು ನಾಲ್ಕು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಕಿರಣ್ ಕೃಷ್ಣ ಮೂರ್ತಿ ಅವರು ಇಡೀ ಸಿನಿಮಾಕ್ಕೆ ಹಿನ್ನೆಲೆ ಸಂಗೀತ ನೀಡಿದ್ದಾರೆ. ಹರ್ಷಕುಮಾರ್ ಗೌಡ ಅವರ ಛಾಯಾಗ್ರಹಣವಿದೆ. ಜ್ಞಾನೇಶ್ ಬಿ. ಮಾತಾಡ್ ಅವರ ಸಂಕಲನ ಇದೆ. ಸೆನ್ಸಾರ್ ಕೂಡಾ ಮುಗಿದಿದೆ.
Read More…Source link
[wpas_products keywords=”deal of the day party wear for men wedding shirt”]