ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ಇತ್ತಿಚೆಗಷ್ಟೇ ಆತ್ಮಹತ್ಯೆಗೆ ಶರಣಾಗಿದ್ದರು. ಹೀಗಾಗಿ, ಶೋಕ ಸಾಗರದಲ್ಲಿ ಮುಳುಗಿರುವ ಯಡಿಯೂರಪ್ಪ ಅವರಿಗೆ, ಡಿಕೆಶಿ ಸಾಂತ್ವನ ಹೇಳಿದರು. ಯಡಿಯೂರಪ್ಪನವರ ಪುತ್ರ ಬಿ. ವೈ. ವಿಜಯೇಂದ್ರ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಆತ್ಮಹತ್ಯೆಗೆ ಶರಣಾಗಿದ್ದ ಸೌಂದರ್ಯ
ಮಾಜಿ ಸಿಎಂ ಯಡಿಯೂರಪ್ಪ ಅವರ ಎರಡನೇ ಪುತ್ರಿ ಪದ್ಮಾವತಿ ಅವರ ಮಗಳಾದ ಸೌಂದರ್ಯ ಅವರು ಜನವರಿ 28 ಶುಕ್ರವಾರದಂದು ಆತ್ಮಹತ್ಯೆಗೆ ಶರಣಾಗಿದ್ದರು. ಬೆಂಗಳೂರು ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. 30 ವರ್ಷ ವಯಸ್ಸಿನ ಸೌಂದರ್ಯ ಅವರು ತಾವು ವಾಸವಿದ್ದ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.
ಬೆಂಗಳೂರಿನ ವಸಂತ ನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್ನಲ್ಲಿ ಅವರು ವಾಸಿಸುತ್ತಿದ್ದರು. ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಸೌಂದರ್ಯ ಅವರಿಗೆ 2018ರಲ್ಲಿ ವೈದ್ಯ ಡಾ. ನೀರಜ್ ಅವರ ಜೊತೆ ವಿವಾಹವಾಗಿತ್ತು. ದಂಪತಿ 9 ತಿಂಗಳ ಮಗು ಕೂಡಾ ಇದೆ.
ಸೌಂದರ್ಯ ಅವರ ಪತಿ ಡಾ. ನೀರಜ್ ಅವರು ಜನವರಿ 28 ಶುಕ್ರವಾರದಂದು ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಗಂಡ ಕೆಲಸಕ್ಕೆ ಹೋದ ಬಳಿಕ ಸೌಂದರ್ಯ 10 ಗಂಟೆಯ ವೇಳೆಗೆ ತನ್ನ ಕೋಣೆಯನ್ನು ಲಾಕ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮನೆ ಕೆಲಸದವರು ಬಂದಾಗ ಬಾಗಿಲು ತೆಗೆಯದಿದ್ದಾಗ ಸೌಂದರ್ಯ ಪತಿ ಡಾ. ನೀರಜ್ಗೆ ಕೆಲಸದವರು ಕರೆ ಮಾಡಿದ್ದರು. ಮನೆ ಕೆಲಸದವರು ಫೋನ್ ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು.
Read more
[wpas_products keywords=”deal of the day sale today offer all”]