Karnataka news paper

ಬೆಂಗಳೂರು: ಹಿಜಾಬ್‌ ಧಾರಣೆ ಮೂಲಭೂತ ಹಕ್ಕು ಎಂದು ಘೋಷಿಸಿ, ಹೈಕೋರ್ಟ್‌ಗೆ ವಿದ್ಯಾರ್ಥಿನಿ ಮೊರೆ


ಬೆಂಗಳೂರು: ರಾಜ್ಯದ ಉಡುಪಿ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್‌ ಧಾರಣೆ ವಿವಾದ ಹೈಕೋರ್ಟ್‌ ಮೆಟ್ಟಿಲೇರಿದೆ. ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಹಿಜಾಬ್‌ ಧರಿಸುವುದು ಸಂವಿಧಾನದ ಕಲಂ 14 ಮತ್ತು 25 ರನ್ವಯ ಮುಲಭೂತ ಹಕ್ಕು ಎಂದು ಘೋಷಿಸುವಂತೆ ಕೋರಿದ್ದಾರೆ.

ಆ ಅರ್ಜಿ ಇನ್ನೂ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಬೇಕಿದೆ. ಅಲ್ಲದೆ, ಶಿಕ್ಷಣ ಸಂಸ್ಥೆಗಳು ಹಿಜಾಬ್‌ ಧಾರಣೆಯನ್ನು ನಿರ್ಬಂಧಿಸುವಂತಿಲ್ಲ ಎಂದು ಆದೇಶ ನೀಡುವಂತೆ ವಿದ್ಯಾರ್ಥಿನಿ ಕೋರಿದ್ದಾರೆ. ಧಾರ್ಮಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡಲು ಸರಕಾರಕ್ಕೆ ಅಧಿಕಾರವಿಲ್ಲ. ಹಾಗೆ ಮಾಡುತ್ತಿರುವುದು ಸಂವಿಧಾನಿಕ ನಿಯಮಗಳ ಉಲ್ಲಂಘನೆಯಾಗಿದೆ. ಸರಕಾರ ರಾಜಕೀಯ ಪ್ರೇರಿತವಾಗಿ, ತಾರತಮ್ಯದ ಉದ್ದೇಶದಿಂದ ಇಂತಹ ಕ್ರಮ ಅನುಸರಿಸುತ್ತಿದೆ.

ಜ್ಞಾನ ಭಾರತಿ ಆವರಣದಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಂಘರ್ಷ: ಪೊಲೀಸರಿಂದ ಲಘು ಲಾಠಿ ಪ್ರಹಾರ..!

ಅರ್ಜಿದಾರರ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ. ಸರಕಾರಿ ಒಡೆತನದ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಾಬ್‌ ಧರಿಸಲಾಗುತ್ತಿದೆ ಎಂಬ ಒಂದೇ ಕಾರಣಕ್ಕೆ ಕಾಲೇಜಿನ ಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ. 2021ರ ಡಿ.28 ರಂದು ಮುಸ್ಲಿಂ ಧರ್ಮದ ಹೆಣ್ಣು ಮಕ್ಕಳಿಗೆ ಕಾಲೇಜು ಪ್ರವೇಶ ನಿರ್ಬಂಧಿಸಲಾಗಿದೆ. ಅವರಿಗೆ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಬಂಧನ ವಾರಂಟ್‌ ಬಳಿಕ ನಿರೀಕ್ಷಣಾ ಬೇಲ್‌ ಇಲ್ಲ

ಬೆಂಗಳೂರು: ಆರೋಪಿ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌ ಜಾರಿಯಾದ ನಂತರ, ನಿರೀಕ್ಷಣಾ ಜಾಮೀನು ಸಲ್ಲಿಕೆಗೆ ಅವಕಾಶವಿಲ್ಲ ಎಂದು ಹೈಕೋರ್ಟ್‌ ಸೋಮವಾರ ಆದೇಶಿಸಿದೆ. ‘‘ಆರೋಪಿಯು ಒಮ್ಮೆ ಕೋರ್ಟ್‌ ಮುಂದೆ ಹಾಜರಾದರೆ, ಬಳಿಕ ಆತ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ(ಸಿಆರ್‌ಪಿಸಿ) ಸೆಕ್ಷನ್‌ 438ರ ಅನ್ವಯ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ’’ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಗೌರಿಬಿದನೂರಿನ ರಮೇಶ್‌ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪಧಿರಿಧಿಶೀಧಿಲಿಧಿಸಿಧಿದ ನ್ಯಾ. ಎಚ್‌. ಪಿ. ಸಂದೇಶ್‌ ಅವರಿದ್ದ ಪೀಠ, ಈ ಆದೇಶ ನೀಡಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ‘‘ಎಸ್‌.ಆರ್‌. ನಾಗರಾಜ್‌ ಹಾಗೂ ಕೆ. ಸೋಮಶೇಖರ್‌ ಮತ್ತು ರಾಜ್ಯ ಸರಕಾರದ ನಡುವಿನ ಪ್ರಕರಣಗಳಲ್ಲಿ ಆರೋಪಿಗೆ ಜಾಮೀನನ್ನು ನಿರಾಕರಿಸಲಾಗಿದೆ. ಆರೋಪಿಯು ಒಮ್ಮೆ ವಿಚಾರಣಾ ಕೋರ್ಟ್‌ ಮುಂದೆ ಖುದ್ದಾಗಿ ಅಥವಾ ವಕೀಲರ ಮುಖಾಂತರ ಹಾಜರಾಗಿ, ನಂತರದ ದಿನಗಳಲ್ಲಿ ವಿಚಾರಣೆಗೆ ಗೈರಾದ ಕಾರಣಕ್ಕೆ ವಾರಂಟ್‌ ಜಾರಿಯಾದರೆ, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲವೆಂದು ಹೈಕೋರ್ಟ್‌ ಈ ಹಿಂದೆಯೇ ಆದೇಶಿಸಿದೆ. ಅದರಂತೆ ಈ ಪ್ರಕರಣದಲ್ಲೂಜಾಮೀನು ನೀಡಲಾಧಿಗದು,’ಧಿ’ ಎಂದು ನ್ಯಾಯಾಲಯ ಹೇಳಿದೆ.

ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಬೆಂಗಳೂರಿನ ಉದ್ಯಮಿ ಮೊಮ್ಮಗ!

2020ರ ಜು.8ರಂದು ಗೌರಿಬಿದಧಿನೂರಿನ ಉಪ ಅರಣ್ಯ ವಲಯಾಧಿಕಾರಿಯು ರಮೇಶ್‌ ಮನೆಯಲ್ಲಿದ್ದ ಮೂರು ಉಡಗಳು ಹಾಗೂ 3 ಗೌಜಲ ಹಕ್ಕಿಗಳನ್ನು ವಶಪಡಿಸಿಕೊಂಡಿದ್ದರು. ಈ ಸಂಬಂಧ ವಿಚಾರಣಾ ನ್ಯಾಯಾಲಯವು, ಪ್ರಕರಣ ದಾಖಲಿಸಿಕೊಂಡು ಆರೋಪಿಗೆ 2021ರ ಅ.5ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್‌ ಜಾರಿಗೊಳಿಸಿತ್ತು. ಅಂದು ವಕೀಲರ ಮೂಲಕ ಆರೋಪಿಯು ಒಂದು ದಿನದ ವಿಚಾರಣೆಗೆ ವಿನಾಯಿತಿ ಕೋರಿದ್ದರು. ಬಳಿಕ ವಿಚಾರಣೆಗೆ ಹಾಜಧಿರಾಗದ ಹಿನ್ನೆಲೆಯಲ್ಲಿ ರಮೇಶ್‌ ವಿರುದ್ಧ 2021ರ ಅ.6ರಂದು ಎನ್‌ಬಿಡಬ್ಲ್ಯೂ ಜಾರಿಗೊಳಿಸಲಾಗಿತ್ತು. ಆರೋಪಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸೆಷನ್ಸ್‌ ಕೋರ್ಟ್‌ ವಜಾಗೊಳಿಸಿತ್ತು.



Read more

[wpas_products keywords=”deal of the day sale today offer all”]