ಬೆಂಗಳೂರು: ಮಹಿಳೆಗೆ ಒದ್ದು, ಅವಾಚ್ಯ ಪದಗಳಿಂದ ನಿಂದಿಸಿದ್ದ ಆರೋಪದಡಿ ಹಲಸೂರು ಗೇಟ್ ಸಂಚಾರ ಠಾಣೆ ಎಎಸ್ಐ ನಾರಾಯಣ ಅವರನ್ನು ಅಮಾನತುಗೊಳಿಸಿ ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಆದೇಶಿಸಿದ್ದಾರೆ.
ಜೆ.ಸಿ.ರಸ್ತೆಯಲ್ಲಿ ಟೋಯಿಂಗ್ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ನಾರಾಯಣ ಅವರು ಅಂಗವಿಕಲ ಮಹಿಳೆ ಮಂಜುಳಾ (37) ಎಂಬುವವರನ್ನು ರಸ್ತೆಯಲ್ಲಿ ಎಳೆದಾಡಿ ಬುಟುಗಾಲಿನಿಂದ ಒದ್ದು, ಅವಾಚ್ಯ ಪದಗಳಿಂದ ನಿಂದಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಎಎಸ್ಐ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಅವರ ಎಎಸ್ಐ ನಾರಾಯಣ ಅವರನ್ನು ಅಮಾನತುಗೊಳಿಸಿ ಘಟನೆ ಸಂಬಂಧ ವಿಚಾರಣೆಗೆ ಆದೇಶಿಸಿದ್ದಾರೆ.
ಇದನ್ನೂ ಓದಿ: ಮಹಿಳೆ ಮೇಲೆ ಸಂಚಾರಿ ಎಎಸ್ಐ ಹಲ್ಲೆ ಪ್ರಕರಣ: ತನಿಖೆಗೆ ಆದೇಶಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ
ಮೂರು ದಿನದ ಹಿಂದೆ ಹಲಸೂರು ಗೇಟ್ ಸಂಚಾರ ಠಾಣೆ ವ್ಯಾಪ್ತಿಯ ಟೋಯಿಂಗ್ ವಾಹನದ ಸಿಬ್ಬಂದಿ ಮೇಲೆ ಅಂಗವಿಕಲ ಮಹಿಳೆ ಕಲ್ಲು ಬೀಸಿದ್ದಾಳೆ. ಅದು ಎಎಸ್ಐ ಮುಖಕ್ಕೆ ಬಿದ್ದು ರಕ್ತ ಬಂದಿದೆ. ಟೋಯಿಂಗ್ ವಾಹನದಿಂದ ಕೆಳಗೆ ಇಳಿದು ಬಂದ ಎಎಸ್ಐ ಅವಾಚ್ಯ ಪದಗಳಿಂದ ನಿಂದನೆ ಮಾಡಿ ಬೂಟು ಕಾಲಲ್ಲಿ ಒದ್ದಿದ್ದರು.
ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎಎಸ್ಐ ಆನಂತರ ಪುನಃ ಆ ಮಹಿಳೆಗೆ ಹಲ್ಲೆ ಮಾಡಿದ್ದು, ರಕ್ತ ಬಂದಿದೆ. ಇದಾದ ಬಳಿಕ ಎಎಸ್ಐ ಎಸ್.ಜೆ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿ ಹಲ್ಲೆ ಮಾಡಿದ ಆರೋಪದಡಿ ಮೂರು ದಿನದ ಹಿಂದೆ ಅಂಗವಿಕಲ ಮಹಿಳೆಯನ್ನೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನು ಆಕೆ ವಿಕಲಚೇತನ ಇರುವದರಿಂದ ಕ್ಷಮಿಸಿ ಬಿಡಿ ಎಂದು ಬಿಬಿಎಂಪಿ ಸಿಬ್ಬಂದಿ ಪೊಲೀಸರನ್ನು ಕೇಳಿಕೊಂಡಿದ್ದಾರೆ. ಆದರೂ ಆಕೆಯನ್ನು ಬಿಟ್ಟಿಲ್ಲ ಎನ್ನಲಾಗಿದೆ.
ಈ ಮಹಿಳೆಗೆ ಟೋಯಿಂಗ್ ವಾಹನ ಕಂಡರೆ ಅಗಲ್ಲ ಎನ್ನಲಾಗಿದೆ. ಹೀಗಾಗಿ ಟೋಯಿಂಗ್ ಮಾಡದಂತೆ ಪ್ರತಿ ನಿತ್ಯವೂ ಟೋಯಿಂಗ್ ವಾಹನದ ಮೇಲೆ ಕಲ್ಲು ಎಸೆಯುತ್ತಿದ್ದಳು. ಆಕೆಯನ್ನು ಯಾರೂ ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ಮೂರು ದಿನದ ಹಿಂದೆ ಆಕೆ ತೂರಿದ ಕಲ್ಲು ಎಎಸ್ಐ ಮುಖಕ್ಕೆ ಬಿದ್ದಿದೆ. ಆ ಸಿಟ್ಟಿನಲ್ಲಿ ಬೂಟು ಕಾಲಿನಲ್ಲಿ ಒದ್ದು ಆ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
Read more
[wpas_products keywords=”deal of the day”]