Karnataka news paper

ಚಿತ್ರಮಂದಿರ ಭರ್ತಿಗೆ ಅವಕಾಶ: ತಜ್ಞರ ಸಲಹೆ ಪಡೆದು ಕ್ರಮ: ಕಂದಾಯ ಸಚಿವ ಆರ್. ಅಶೋಕ


ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇ 100 ರಷ್ಟು ಆಸನಗಳ ಭರ್ತಿಗೆ ಅನುಮತಿ ನೀಡಬೇಕು ಎಂಬ ವಿಚಾರದಲ್ಲಿ ತಜ್ಞರ ಸಲಹೆ ಪಡೆದು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳ ಭೇಟಿಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

‘ಕೆಲವು ದಿನಗಳ ಹಿಂದೆ ವಾಣಿಜ್ಯ ಮಂಡಳಿ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಶೇ 100 ರಷ್ಟು ಆಸನಗಳ ಭರ್ತಿಗೆ ಸಂಬಂಧಿಸಿದಂತೆ ಸಮಗ್ರ ವರದಿ ಒಳಗೊಂಡ ಮನವಿ ನೀಡುವಂತೆ ತಿಳಿಸಿದ್ದೆವು. ಅದನ್ನು ಇವತ್ತು ಸಲ್ಲಿಸಿದ್ದಾರೆ. ಮನವಿಯನ್ನು ತಜ್ಞರ ಮುಂದಿಟ್ಟು ಬಳಿಕ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದರು.

‘ಚಿತ್ರರಂಗ ಕಷ್ಟದಲ್ಲಿದೆ. ಸಾಕಷ್ಟು ಚಲನಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ಬೇರೆ ರಾಜ್ಯಗಳಲ್ಲಿ ಶೇ 100 ಚಿತ್ರ ಮಂದಿರ ಭರ್ತಿಗೆ ಅನುಮತಿ ಇದೆ. ಈ ಎಲ್ಲ ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಜತೆ ಮಾತನಾಡುತ್ತೇನೆ’ ಎಂದು ಅಶೋಕ ಹೇಳಿದರು.

ಅನ್ಯಾಯ ಒಪ್ಪುವುದಿಲ್ಲ:ನದಿಗಳ ಜೋಡಣೆಯಿಂದ ರಾಜ್ಯಕ್ಕೆ ನ್ಯಾಯಯುತವಾದ ನೀರಿನ ಪಾಲು ಸಿಗಬೇಕು. ರಾಜ್ಯಕ್ಕೆ ಅನ್ಯಾಯವಾಗುವ ಹಾಗಿದ್ದರೆ ಅದನ್ನು ಒಪ್ಪುವ ಪ್ರಶ್ನೆಯೇ ಇಲ್ಲ ಎಂದು ಅಶೋಕ ಹೇಳಿದರು.

 



Read more from source

[wpas_products keywords=”deal of the day sale today kitchen”]