Karnataka news paper

ವಿದ್ಯುತ್ ಚಾಲಿತ ದ್ವಿಚಕ್ರವಾಹನಗಳ 1,000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪನೆಗೆ ಒಪ್ಪಂದ


Online Desk

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳ 1,000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪಿಸಲು ಮೆ. ಎಥರ್ ಎನರ್ಜಿ ಮತ್ತು ಎಸ್ಕಾಂಗಳ ನಡುವೆ ಒಪ್ಪಂದವೇರ್ಪಟ್ಟಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಇಂದು ಸಹಿ ಮಾಡಲಾಯಿತು.
 
ಈ ಚಾರ್ಜಿಂಗ್ ಸೌಲಭ್ಯಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು ಎಸ್ಕಾಂಗಳು ನೀಡಲಿದ್ದು, ಸರ್ಕಾರಿ ಸಂಸ್ಥೆಗಳು ಈ ಸೌಲಭ್ಯ ಸ್ಥಾಪನೆಗೆ ಸ್ಥಳಾವಕಾಶ ಒದಗಿಸಲು ಎಸ್ಕಾಂಗಳೊಂದಿಗೆ ಸಮನ್ವಯ ವಹಿಸಲಿವೆ. ಎಥರ್ ಎನರ್ಜಿ ಕಂಪನಿಯು ವಿದ್ಯುತ್ ದ್ವಿಚಕ್ರ ವಾಹನಗಳಿಗೆ ಉಚಿತವಾಗಿ ಚಾರ್ಜಿಂಗ್ ಸೌಲಭ್ಯಗಳನ್ನು ಕಲ್ಪಿಸಲಿವೆ. 

ಎಥರ್ ಎನರ್ಜಿ ಕಂಪನಿ ವ್ಯವಸ್ಥಾಪಕ ನಿರ್ದೇಶಕ ತರುಣ್ ಮೆಹ್ತಾ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಈ ಒಪ್ಪಂದಕ್ಕೆ ಸಹಿ ಮಾಡಿದರು. ಶಾಸಕ ಅರವಿಂದ ಬೆಲ್ಲದ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯಕ್ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಶುದ್ಧ ಮತ್ತು ಸುಸ್ಥಿರ ಇಂಧನ ಕ್ಷೇತ್ರದಲ್ಲಿ ಸುಲಭ ವ್ಯವಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.





Read more

[wpas_products keywords=”deal of the day”]