Karnataka news paper

ಸಂಗೀತ ಕ್ಷೇತ್ರ: ಪ್ರೊ.ಎಂ.ವೆಂಕಟೇಶ ಕುಮಾರ್‌ಗೆ ಕಾಳಿದಾಸ ಸಮ್ಮಾನ್ ಪ್ರಶಸ್ತಿ


ಧಾರವಾಡ: ಇಲ್ಲಿನ ಹೆಸರಾಂತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ ಪ್ರೊ.ಎಂ.ವೆಂಕಟೇಶ ಕುಮಾರ್ ಅವರಿಗೆ  ಮಧ್ಯಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ಕಾಳಿದಾಸ ಸಮ್ಮಾನ ಪ್ರಶಸ್ತಿ ಘೋಷಣೆಯಾಗಿದೆ.

2017 ನೇ ಸಾಲಿನ ಪುರಸ್ಕಾರ ಇದಾಗಿದೆ. ಹಿಂದೂಸ್ತಾನಿ ಸಂಗೀತ ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆ, ಸಾಧನೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಮಧ್ಯ ಪ್ರದೇಶ ಸರ್ಕಾರದ ಸಂಸ್ಕೃತಿ ಸಚಿವಾಲಯದ ಸಂಚಾಲಕ ಆದಿತಿಕುಮಾರ್ ತ್ರಿಪಾಠಿ ತಿಳಿಸಿದ್ದಾರೆ. ಪ್ರಶಸ್ತಿಯು ₹2 ಲಕ್ಷ ನಗದು ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿದೆ.



Read more from source

[wpas_products keywords=”deal of the day sale today kitchen”]