Karnataka news paper

ನಾನು ಜನರಿಂದ ಆಯ್ಕೆಯಾದವನು: ಸಿದ್ದರಾಮಯ್ಯಗೆ ರಘುಪತಿ ಭಟ್ ತಿರುಗೇಟು


ಉಡುಪಿ: ಹಿಜಾಬ್ ವಿವಾದ ಕುರಿತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಟೀಕೆಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

‘ರಘುಪತಿ ಭಟ್ ಯಾರು ಎಂದು ಪ್ರಶ್ನಿಸುವ ಸಿದ್ದರಾಮಯ್ಯ ಅವರೇ, ನಾನು ಜನರಿಂದ ಆಯ್ಕೆಯಾದವನು, ನಿಮ್ಮ ಹಾಗೆ ಸ್ವಕ್ಷೇತ್ರದಲ್ಲಿ ಜನರಿಂದ ತಿರಸ್ಕೃತಗೊಂಡು, ಬೇರೆಯವರ ಕ್ಷೇತ್ರದ ಮೇಲೆ ಅವಲಂಬಿತನಾದವನಲ್ಲ. 

ನನ್ನ ಕ್ಷೇತ್ರದ ಸಮಸ್ಯೆಗೆ ಧ್ವನಿಯಾಗುವುದು ನನಗೆ ಸಂವಿಧಾನ ಕಲ್ಪಿಸಿದ ಹಕ್ಕು. ಅದನ್ನು ನಿಮ್ಮಿಂದ ಕಲಿಯಬೇಕಿಲ್ಲ’ ಎಂದು ಕುಟುಕಿದ್ದಾರೆ.

ಇದನ್ನೂ ಓದಿ.. ಸಮವಸ್ತ್ರ ಧರಿಸದಿದ್ದರೆ ಕಾಲೇಜು ಪ್ರವೇಶಕ್ಕೆ ಅವಕಾಶವಿಲ್ಲ: ಬಿ.ಸಿ.ನಾಗೇಶ್‌
 



Read more from source

[wpas_products keywords=”deal of the day sale today kitchen”]