The New Indian Express
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳು, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಸೇರಿದಂತೆ ರಾಜ್ಯದಲ್ಲಿ ಎದುರಾಗಲಿರುವ ಸರಣಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಕಾಂಗ್ರೆಸ್, ಇದಕ್ಕಾಗಿ ಸದಸ್ಯತ್ವ ಅಭಿಯಾನದತ್ತ ಗಮನ ಹರಿಸಿ ಚುನಾವಣೆಗೆ ಸಿದ್ಧತೆ ಆರಂಭಿಸಿದೆ.
ಹೈಕಮಾಂಡ್ ನಿರ್ದೇಶನದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ರಾಜ್ಯಾದ್ಯಂತ ಶುಕ್ರವಾರ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಸಂಬಂಧಿಸಿದಂತೆ ಹಾಲಿ ಮತ್ತು ಮಾಜಿ ಶಾಸಕರು, ಜಿಲ್ಲಾ ಅಧ್ಯಕ್ಷರು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ತನ್ನ ಮುಖಂಡರಿಗೆ ಕಾರ್ಯಾಗಾರವನ್ನು ಆರಂಭಿಸಿದೆ.
ಇದನ್ನೂ ಓದಿ: ‘ಬಿಜೆಪಿಯ ಆಂತರಿಕ ವಿಚಾರಗಳ ಬಗ್ಗೆ ಮಾತನಾಡಬೇಡಿ’, ‘ಕೈ’ನಾಯಕರಿಗೆ ಡಿ.ಕೆ.ಶಿವಕುಮಾರ್ ತಾಕೀತು
ಈ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸದಸ್ಯತ್ವ ಅಭಿಯಾನದ ಮೇಲೆ ನಿಗಾ ಇರಿಸಿದ್ದು, ಮಾರ್ಚ್ 31ರೊಳಗೆ 50 ಲಕ್ಷ ಸದಸ್ಯರನ್ನು ಸೇರ್ಪಡೆಗೊಳಿಸುವ ಗುರಿ ಹೊಂದಲಾಗಿದೆ .ಪಕ್ಷವು ಸದಸ್ಯತ್ವ ಅಭಿಯಾನವನ್ನು ಗಂಭೀರವಾಗಿ ಪರಿಗಣಿಸಿದ್ದು, ಸದಸ್ಯರನ್ನು ನೋಂದಾಯಿಸಲು ಪ್ರತಿ ಬೂತ್ನಲ್ಲಿ ದಾಖಲಾತಿಗಳನ್ನು ನೇಮಿಸಲಾಗಿದೆ. ನೇಮಕಾತಿ ಬಳಿಕ ಅವರಿಗೆ ತರಬೇತಿ ನೀಡಲಾಗುತ್ತದೆ ಎಂದು ಹೇಳಿದರು.
ಸದಸ್ಯತ್ವ ಅಭಿಯಾನವು ಕಾಂಗ್ರೆಸ್ನ ಉಪಕ್ರಮದ ಒಂದು ಭಾಗವಾಗಿದ್ದು, ಇದು ಸಮೂಹ ಆಧಾರಿತ ಪಕ್ಷದಿಂದ ಕೇಡರ್ ಆಧಾರಿತ ಪಕ್ಷವಾಗಿಸಲು ಕೈಗೊಂಡಿರುವ ಕ್ರಮವಾಗಿದೆ. ಪಕ್ಷವು ಇತ್ತೀಚೆಗೆ ಸದಸ್ಯತ್ವ ಅಭಿಯಾನವನ್ನು ಪ್ರಾರಂಭಿಸಿದ್ದು, ಈ ಹಿಂದೆ ಕಾಂಗ್ರೆಸ್ ಸದಸ್ಯತ್ವವನ್ನು ನೋಂದಾಯಿಸಲು ಕಾರ್ಯಕರ್ತರಿಗೆ ಸುಮಾರು 70,000 ಪುಸ್ತಕಗಳನ್ನು ನೀಡಿತ್ತು. ಆದರೆ, ಇದೀಗ ಡಿಜಿಟರ್ ಸದಸ್ಯತ್ವ ಅಭಿಯಾನವನ್ನು ಆರಂಭಿಸಿದೆ. ಇದಕ್ಕೆ ಹೆಚ್ಚಿನ ಒತ್ತು ನೀಡಲು ಪಕ್ಷದ ಮುಖಂಡರು ಮುಂದಾಗಿದ್ದಾರೆಂದು ತಿಳಿದುಬಂದಿದೆ.
Read more
[wpas_products keywords=”deal of the day”]