PTI
ಗೋರಖ್ ಪುರ: ರಾಷ್ಟ್ರದಾದ್ಯಂತ ತೀವ್ರ ಗಮನ ಸೆಳೆದಿರುವ ಉತ್ತರ ಪ್ರದೇಶದ ಗೋರಖ್ ಪುರ ನಗರ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಚುನಾವಣಾ ರ್ಯಾಲಿ ನಂತರ ಅಮಿತ್ ಶಾ ಜೊತೆಗೆ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ ಯೋಗಿ ಆದಿತ್ಯನಾಥ್, ತಮ್ಮ ಉಮೇದುವಾರಿಕೆ ಪತ್ರ ಸಲ್ಲಿಸಿದರು.
ಯೋಗಿ ಆದಿತ್ಯನಾಥ್ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಈ ಹಿಂದೆ ಗೋರಖ್ ಪುರ ಲೋಕಸಭಾ ಕ್ಷೇತ್ರದಿಂದ ಐದು ಬಾರಿ ಅವರು ಚುನಾವಣೆಗೆ ಸ್ಪರ್ಧಿಸಿದ್ದರು. ಗೋರಖ್ ಪುರ ನಗರ ವಿಧಾನಸಭಾ ಕ್ಷೇತ್ರಕ್ಕೆ ಮಾರ್ಚ್ 3 ರಂದು ಚುನಾವಣೆ ನಡೆಯಲಿದೆ.
ಉತ್ತರ ಪ್ರದೇಶದಲ್ಲಿ ಜನತೆಯ ಆಶೀರ್ವಾದದೊಂದಿಗೆ ಮತ್ತೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
गोरखपुर में उत्तर प्रदेश के कर्मठ मुख्यमंत्री श्री @myogiadityanath जी के नामांकन कार्यक्रम में सम्मिलित हुआ और उन्हें भव्य विजय की शुभकामनाएं दी।
जनता जनार्दन के आशीर्वाद से भाजपा पुनः 300 पार के संकल्प के साथ उत्तर प्रदेश में इतिहास दोहराने जा रही है। pic.twitter.com/ZkRQnpSbfc
— Amit Shah (@AmitShah) February 4, 2022
Read more
[wpas_products keywords=”deal of the day”]