Karnataka news paper

ಹಿಜಾಬ್ ಆಯ್ತು, ಕೇಸರಿ ಆಯ್ತು; ಇದೀಗ ಕಾಲೇಜಿಗೆ ‘ನೀಲಿ ಶಾಲು’ ಸರದಿ; ಕಾಫಿನಾಡಲ್ಲಿ ಕೇಸರಿಗೆ ಪ್ರತಿಯಾಗಿ ನೀಲಿ ಎಂಟ್ರಿ


| Vijaya Karnataka Web | Updated: Feb 7, 2022, 3:25 PM

ಹಿಜಾಬ್ ಧರಿಸಿ ಬರುತ್ತಿರುವುದನ್ನು ವಿರೋಧಿಸಿ ಎಬಿವಿಪಿ‌ ಸಂಘಟನೆಯ ವಿದ್ಯಾರ್ಥಿಗಳು ಕೇಸರಿಶಾಲು ಧರಿಸಿ ಬಂದಿದ್ದರು. ಇದಕ್ಕೆ ಪ್ರತಿಯಾಗಿ ಬಹುಜನ ವಿದ್ಯಾರ್ಥಿ ಪರಿಷತ್ ಸಂಘಟನೆಯ ವಿದ್ಯಾರ್ಥಿಗಳು ನೀಲಿ‌ ಶಾಲು ಧರಿಸಿ ಕಾಲೇಜಿಗೆ ಬಂದಿದ್ದು, ಈ ವೇಳೆ ಎರಡೂ ಸಂಘಟನೆಗಳ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಬಿಗುವಿನ ವಾತಾವರಣ‌ ನಿರ್ಮಾಣವಾಗಿದೆ. ಹಿಜಾಬ್ ವಿರೋಧಿಸಿ ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು.

 

after hijab and saffron controversy students comes college with blue shawl in chikkamagalur

ಹೈಲೈಟ್ಸ್‌:

  • ಚಿಕ್ಕಮಗಳೂರಲ್ಲಿ ಇನ್ನೂ ನಿಲ್ಲದ ಹಿಜಾಬ್‌-ಕೇಸರಿ ವಿವಾದ
  • ಕೇಸರಿ ಶಾಲಿಗೆ ವಿರೋಧವಾಗಿ ನೀಲಿ ಶಾಲು ಧರಿಸಿದ ವಿದ್ಯಾರ್ಥಿಗಳು
  • ಚಿಕ್ಕಮಗಳೂರು ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಘಟನೆ
ಚಿಕ್ಕಮಗಳೂರು: ಕರಾವಳಿ ಜಿಲ್ಲೆಯಲ್ಲಿದ್ದ ಹಿಜಾಬ್‌ ಮತ್ತು ಕೇಸರಿ ಶಾಲು ವಿವಾದ ಇದೀಗ ಪಕ್ಕದ ಜಿಲ್ಲೆಗಳಿಗೂ ವಿಸ್ತರಿಸಿದೆ. ಚಿಕ್ಕಮಗಳೂರು ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಹಿಜಾಬ್‌ ಮತ್ತು ಕೇಸರಿ ಶಾಲು ತಿಕ್ಕಾಟ ತಾರಕಕ್ಕೇರಿದ್ದು ಇಂದು ಹೊಸ ತಿರುವು ಪಡೆದುಕೊಂಡಿದೆ.

ಕೆಲ ವಿದ್ಯಾರ್ಥಿನಿಯರು ಕಾಲೇಜಿಗೆ ಹಿಜಾಬ್ ಧರಿಸಿ ಬರುತ್ತಿರುವುದನ್ನು ವಿರೋಧಿಸಿ ಎಬಿವಿಪಿ‌ ಸಂಘಟನೆಯ ವಿದ್ಯಾರ್ಥಿಗಳು ಕೇಸರಿಶಾಲು ಧರಿಸಿ ಬಂದಿದ್ದರು. ಇದಕ್ಕೆ ಪ್ರತಿಯಾಗಿ ಬಹುಜನ ವಿದ್ಯಾರ್ಥಿ ಪರಿಷತ್ ಸಂಘಟನೆಯ ವಿದ್ಯಾರ್ಥಿಗಳು ನೀಲಿ‌ ಶಾಲು ಧರಿಸಿ ಕಾಲೇಜಿಗೆ ಬಂದಿದ್ದು, ಈ ವೇಳೆ ಎರಡೂ ಸಂಘಟನೆಗಳ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಬಿಗುವಿನ ವಾತಾವರಣ‌ ನಿರ್ಮಾಣವಾಗಿದೆ. ಹಿಜಾಬ್ ವಿರೋಧಿಸಿ ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು.
ಕುಂದಾಪುರದ ಕಾಲೇಜ್‌ನಲ್ಲಿ ಹಿಜಾಬ್ ಧರಿಸಲು ಸಿಕ್ಕಿತು ಅನುಮತಿ; ಆದರೆ ಪ್ರತ್ಯೇಕ ಕೊಠಡಿ ವ್ಯವಸ್ಥೆ!
ಈ ಪ್ರಕರಣ ಇತ್ಯರ್ಥವಾಗದ ಹಿನ್ನೆಲೆಯಲ್ಲಿ ಸೋಮವಾರ ಸಹ ಕೇಸರಿ ಶಾಲು ಧರಿಸಿ ಬಂದ ಎಬಿವಿಪಿ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ ಪ್ರವೇಶ ನೀಡಲು ನಿರಾಕರಿಸಿದ್ದು, ಈ ವೇಳೆ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಲಾಗಿತ್ತು. ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಇಕ್ಕಟ್ಟಿಗೆ ಸಿಲುಕಿದ ಕಾಲೇಜು ಆಡಳಿತ ಮಂಡಳಿ ಕೇಸರಿ ಶಾಲು ಧರಿಸಿ ಬರಲು ಒಪ್ಪಿಗೆ ನೀಡಿತ್ತು. ಇದನ್ನು ವಿರೋಧಿಸಿ ಬಹುಜನ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ. ಈ ವೇಳೆ ಎರಡೂ ಸಂಘಟನೆಗಳ ನಡುವೆ ವಾಗ್ವಾದ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗದಂತೆ ತಡೆಯಲು ಪೊಲೀಸರು ಹರಸಾಹಸ ಪಟ್ಟು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಗೆ ಕಳುಹಿಸಿದ್ದು ಬಿಗುವಿನ ವಾತಾವರಣ ಉಂಟಾಗಿದೆ.

ಸಮೀಪದ ನಗರಗಳ ಸುದ್ದಿ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ

Web Title : after hijab and saffron controversy students comes college with blue shawl in chikkamagalur
Kannada News from Vijaya Karnataka, TIL Network



Read more

[wpas_products keywords=”deal of the day sale today offer all”]