Karnataka news paper

ಹಿಜಾಬ್ ವಿವಾದ: ಶಾಲಾ ಕಾಲೇಜುಗಳಲ್ಲಿ ಶಾಂತಿಯುತ ವಾತಾವರಣ ಕಾಪಾಡಿ; ಆರಗ ಜ್ಞಾನೇಂದ್ರ ಮನವಿ


ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಶಾಂತಿಯುತ ವಾತಾವರಣ ಕಾಪಾಡಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ. ಈ ಕುರಿತಾಗಿ ಹೇಳಿಕೆ ನೀಡಿರುವ ಅವರು, ಜ್ಞಾನವನ್ನು ಉದ್ದೀಪಿಸುವ ಶೈಕ್ಷಣಿಕ ಕೇಂದ್ರಗಳಲ್ಲಿ ಅಶಾಂತಿ ವಾತಾವರಣಕ್ಕೆ ಕಾರಣರಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಶಾಲಾ ಕಾಲೇಜುಗಳು ರಾಷ್ಟ್ರದ ಭಾವೈಕ್ಯತೆಯ ಕೇಂದ್ರ ಬಿಂದುಗಳು. ರಾಷ್ಟ್ರದ ಆಸ್ತಿಯಾಗಬೇಕಾದ ವಿದ್ಯಾರ್ಥಿಗಳು ಮತೀಯ ಶಕ್ತಿಗಳ ಕೈಯಲ್ಲಿ ಸಾಮಾಜಿಕ ಸ್ವಾಸ್ತ್ಯ ಕೆಡಿಸುವ ಅಸ್ತ್ರಗಳಾಗದಂತೆ ಪೋಷಕರು ಎಚ್ಚರ ವಹಿಸಬೇಕು.

ಹಿಜಾಬ್‌ ವಿವಾದ: ಸಂವಿಧಾನ ನೀಡಿರುವ ಹಕ್ಕೇನು? ರಾಜ್ಯದ ಕಾನೂನು ಹೇಳುವುದೇನು?

ಶೈಕ್ಷಣಿಕ ಕೇಂದ್ರ ಗಳು, ವಿದ್ಯೆ ಕಲಿಯುವ ಹಾಗೂ ಭೋದನೆಯ ದೇಗುಲಗಳಾಗಿಯೇ ಉಳಿಯಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

ಹಿಜಾಬ್ ವಿಚಾರವಾಗಿ ರಾಜ್ಯಾದ್ಯಂತ ಸಾಕಷ್ಟು ವಿವಾದಕ್ಕೆ ಕಾರಣವಾಗುತ್ತಿದೆ. ಹಿಜಾಬ್‌ ಧರಿಸಲು ಅವಕಾಶ ನೀಡಬೇಕು ಎಂದು ಮುಸ್ಲಿಂ ವಿದ್ಯಾರ್ಥಿನಿಯರು ಪಟ್ಟು ಹಿಡಿದರೆ, ಇದಕ್ಕೆ ಪರ್ಯಾಯವಾಗಿ ಕೇಸರಿ ಶಾಲು, ಪೇಟವನ್ನು ಧರಿಸಿಕೊಂಡು ಹಿಂದೂ ವಿದ್ಯಾರ್ಥಿಗಳು ಬರುತ್ತಿದ್ದಾರೆ.

ಮಂಡ್ಯ, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಹಿಜಾಬ್ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಲ್ಲು ತೂರಾಟ, ಲಾಠಿ ಚಾರ್ಜ್‌ ನಂತಹ ಘಟನೆಗಳು ನಡೆದಿದೆ. ಈ ಹಿನ್ನೆಲೆಯಲ್ಲಿ ಆರಗ ಜ್ಞಾನೇಂದ್ರ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ್ದಾರೆ.



Read more

[wpas_products keywords=”deal of the day sale today offer all”]