Karnataka news paper

ಹೊಗೇನಕಲ್ ಜಲವಿದ್ಯುತ್ ಯೋಜನೆ ಹಾಗೂ ನದಿ ಜೋಡಣೆಗೆ ವಿರೋಧ: ಕರ್ನಾಟಕ ಸರ್ಕಾರ ತೀರ್ಮಾನ


ಬೆಂಗಳೂರು: ತಮಿಳುನಾಡು ಸರಕಾರ ಕೈಗೊಂಡಿರುವ ಹೊಗೇನಕಲ್‌ ಜಲ ವಿದ್ಯುತ್‌ ಯೋಜನೆ ಮತ್ತು ಕಾವೇರಿ – ಗುಂಡಾರ್‌ – ವೈಗೈ ನದಿ ಜೋಡಣೆ ಯೋಜನೆಗಳಿಗೆ ರಾಜ್ಯ ಸರಕಾರ ವಿರೋಧ ವ್ಯಕ್ತಪಡಿಸಿದೆ. ನ್ಯಾಯಾಲಯದ ಮೂಲಕವೂ ಈ ಯೋಜನೆಗಳಿಗೆ ರಾಜ್ಯದ ವಿರೋಧವನ್ನು ಮುಂದಿಡುವ ಮಹತ್ವದ ತೀರ್ಮಾನವನ್ನು ಸರಕಾರ ಕೈಗೊಂಡಿದೆ.

ರಾಜ್ಯಕ್ಕೆ ಸಂಬಂಧಪಟ್ಟ ಅಂತಾರಾಜ್ಯ ಜಲ ವಿವಾದ ಕುರಿತಂತೆ ಸಚಿವರು, ಹಿರಿಯ ನ್ಯಾಯವಾದಿಗಳು, ಅಡ್ವೋಕೇಟ್‌ ಜನರಲ್‌ ಹಾಗೂ ಅಧಿಕಾರಿಗಳೊಂದಿಗೆ ಹೊಸ ದಿಲ್ಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದರು. ಚರ್ಚೆ ಬಳಿಕ ಈ ನಿರ್ಧಾರ ತೆಗೆದುಕೊಂಡರು.

ಸಭೆ ಬಳಿಕ ಈ ಕುರಿತು ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ, ‘ಕರ್ನಾಟಕವು ರಾಜ್ಯದ ನೆಲ ಜಲದ ವಿಚಾರದಲ್ಲಿಎಂದಿಗೂ ಒಂದಾಗಿದೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಎನ್‌ಜಿಟಿ ಹಾಗೂ ಮತ್ತೊಂದು ಪ್ರಕರಣ ಒಟ್ಟಿಗೆ ವಿಚಾರಣೆಗೆ ಬರಲಿದ್ದು, ಆಕ್ಷೇಪಣೆ ಸಲ್ಲಿಸಿ ರಾಜ್ಯದ ನಿಲುವು ಸ್ಪಷ್ಟಪಡಿಸಲಾಗುವುದು’ ಎಂದು ಹೇಳಿದರು.

Union Budget 2022: ನದಿ ಜೋಡಣೆ ಯೋಜನೆಯಿಂದ ತಮಿಳುನಾಡು, ಆಂಧ್ರಕ್ಕಷ್ಟೇ ಹೆಚ್ಚು ಪ್ರಯೋಜನ..?
ನ್ಯಾಯಮೂರ್ತಿಗಳ ನೇಮಕಕ್ಕೆ ಮನವಿ

‘ಕೃಷ್ಣಾ ನದಿ ಎರಡನೇ ನ್ಯಾಯಾಧಿಕರಣಗಳ ಅಧಿಸೂಚನೆಗೆ ಸಂಬಂಧಿಸಿದಂತೆ ಕಳೆದ ಬಾರಿ ನ್ಯಾಯಮೂರ್ತಿಗಳು ಹಿಂದೆ ಸರಿದಿದ್ದು, ಮುಂದಿನ ವಿಚಾರಣೆಯಷ್ಟರೊಳಗೆ ಹೊಸ ನ್ಯಾಯಮೂರ್ತಿಗಳ ನೇಮಕವಾಗಬೇಕೆಂದು ಕೋರಿ ರಿಜಿಸ್ಟ್ರಾರ್‌ ಜನರಲ್‌ ಬಳಿ ಅರ್ಜಿ ಸಲ್ಲಿಸಲಾಗಿದೆ. ಮುಖ್ಯ ನ್ಯಾಯಮೂರ್ತಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ. ಒಂದೊಮ್ಮೆ ಇದು ತಪ್ಪಿದಲ್ಲಿ ನ್ಯಾಯಾಲಯದಲ್ಲಿ ಈ ಬಗ್ಗೆ ಪ್ರಸ್ತಾಪಿಸಲು ತೀರ್ಮಾನಿಸಲಾಗಿದೆ’ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

‘ಕೇಂದ್ರ ಜಲ ಆಯೋಗ ಹಾಗೂ ಕಾವೇರಿ ನದಿ ಪ್ರಾಧಿಕಾರದ ಮುಂದೆಯೂ ರಾಜ್ಯದ ನಿಲುವನ್ನು ಸ್ಪಷ್ಟಪಡಿಸಲು ತೀರ್ಮಾನಿಸಲಾಗಿದೆ. ಕೇಂದ್ರ ಜಲ ಶಕ್ತಿ ಸಚಿವರನ್ನು ಭೇಟಿಯಾಗಿದ್ದು, ಪರಿಸರ ಅನುಮತಿ ದೊರೆಯಬೇಕಿದೆ’ ಎಂದು ಹೇಳಿದರು.

ಮಹದಾಯಿ ಬಗ್ಗೆಯೂ ಚರ್ಚೆ

ಮಹದಾಯಿ ನದಿ ವಿಚಾರವಾಗಿಯೂ ಸಭೆಯಲ್ಲಿ ಚರ್ಚೆಯಾಗಿದ್ದು, ವಿಚಾರಣೆಯನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳುವಂತೆ ಕೋರಲಾಗಿದೆ. ಅದು ಸಹ ಅಂತಿಮ ಘಟ್ಟದಲ್ಲಿದೆ. ನ್ಯಾಯಾಧಿಕರಣದ ಬಗ್ಗೆ ಎಲ್ಲ ರಾಜ್ಯಗಳೂ ಆಕ್ಷೇಪ ವ್ಯಕ್ತಪಡಿಸಿರುವ ಪ್ರಕರಣವಾಗಿದ್ದು, ಅಲ್ಲಿಯೇ ನಾವೂ ಪರಿಹಾರ ಕಂಡುಕೊಳ್ಳಬೇಕಿದೆ. ನದಿ ತಿರುವಿನ ಬಗ್ಗೆ ಈಗಾಗಲೇ ಚರ್ಚೆಯಾಗಿ ನಿರ್ಧಾರವಾಗಿದೆ. ಡಿಪಿಆರ್‌ ಒಪ್ಪಿಗೆಯಾದರೆ ಕಾಮಗಾರಿ ಮುಂದುವರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದ ಹಿತಾಸಕ್ತಿ ಬಲಿಕೊಟ್ಟು ನದಿ ಜೋಡಣೆ ಯೋಜನೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ; ಈಶ್ವರಪ್ಪ
‘ಮುಂದೆ ಯಾವ ರೀತಿ ನಮ್ಮ ಯೋಜನೆಗಳನ್ನು ಆರಂಭಿಸಬೇಕು. ನ್ಯಾಯಾಲಯದ ಪ್ರಕರಣಗಳು ಯಾವ ಹಂತದಲ್ಲಿವೆ. ಈಗಾಗಲೇ ಪ್ರಾರಂಭಿಸಿರುವ ಯೋಜನೆಗಳನ್ನು ಹೇಗೆ ಮುಂದುವರಿಸಬೇಕು ಎಂಬ ಕುರಿತೂ ಸಮಾಲೋಚಿಸಲಾಗಿದೆ. ಒಟ್ಟಾರೆ ಸಲಹೆಗಳನ್ನು ಸ್ವೀಕರಿಸಲಾಗಿದೆ’ ಎಂದು ತಿಳಿಸಿದರು.

ನದಿ ಜೋಡಣೆಗೆ ಆಕ್ಷೇಪ

‘ಗೋದಾವರಿ, ಕೃಷ್ಣಾ, ಕಾವೇರಿ, ಪೆನ್ನಾರ್‌ ನದಿ ಜೋಡಣೆಗೆ ಸಂಬಂಧಿಸಿದಂತೆಯೂ ಸಭೆಯಲ್ಲಿ ಚರ್ಚಿಸಲಾಗಿದ್ದು, ಆಕ್ಷೇಪಣೆಗಳನ್ನು ದಾಖಲಿಸಬೇಕಿದೆ. ಇತರ ರಾಜ್ಯಗಳೂ ಸೇರಿದಂತೆ ನಮ್ಮ ಪಾಲು ನಿರ್ಧರಿಸುವವರೆಗೂ ಡಿಪಿಆರ್‌‍ಗೆ ಒಪ್ಪಿಗೆ ನೀಡಬಾರದು. ಹೊಸದಾಗಿ ಆಕ್ಷೇಪ ಸಲ್ಲಿಸಬೇಕಿದೆ. ಎಲ್ಲಾ ರಾಜ್ಯಗಳೂ ಈ ಬಗ್ಗೆ ಒಪ್ಪಿಗೆ ನೀಡಬೇಕು ಎಂದು ಹಣಕಾಸು ಸಚಿವರಿಗೆ ತಿಳಿಸಲಾಗಿದೆ’ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನದಿ ಜೋಡಣೆಯಿಂದ ತಮಿಳುನಾಡಿಗೆ ಶೇ. 90ರಷ್ಟು ಅನುಕೂಲ : ಸಿದ್ದರಾಮಯ್ಯ ಆಕ್ರೋಶ



Read more

[wpas_products keywords=”deal of the day sale today offer all”]